ಬ್ರೇಕಿಂಗ್ ನ್ಯೂಸ್
30-06-21 05:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 30: ಗಾಂಜಾ ಬೆಳೆಯಲ್ಲೇ ಅತ್ಯಂತ ಹೆಚ್ಚು ಬೆಲೆಬಾಳುವ ಹೈಡ್ರೋವೀಡ್ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮಂಗಳೂರಿನ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ದೇರಳಕಟ್ಟೆ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ನಗರದ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿನಿ ಮಿನು ರಶ್ಮಿ ಮತ್ತು ಕಾಸರಗೋಡಿನ ಮಂಗಲ್ಪಾಡಿ ನಿವಾಸಿ ಅಜ್ಮಲ್ ಎಂಬವರನ್ನು ಬಂಧಿಸಿದ್ದಾರೆ. ಇವರ ಬಳಿಯಿದ್ದ ಸುಮಾರು 30 ಲಕ್ಷದಿಂದ ಒಂದು ಕೋಟಿ ಬೆಲೆಬಾಳುವ ಒಂದು ಕೆಜಿ 250 ಗ್ರಾಮ್ ಹೈಡ್ರೋವೀಡ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಮಿನು ರಶ್ಮಿ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯ್ಲ್ ನಿವಾಸಿಯಾಗಿದ್ದು ಮಂಗಳೂರಿನ ಶ್ರೀನಿವಾಸ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ. ಆದರೆ, ಇದೇ ವೇಳೆ ಮಂಗಲ್ಪಾಡಿ ನಿವಾಸಿ ಅಜ್ಮಲ್ ಜೊತೆ ಒಡನಾಟ ಹೊಂದಿದ್ದಳು. ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ರೈಲಿನಲ್ಲಿ ಮಂಗಳೂರಿಗೆ ಬಂದು ಅಜ್ಮಲ್ ಜೊತೆಗೆ ಕಾರಿನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದಳು. ಕಾರಿನಲ್ಲಿ ಹೈಡ್ರೋವೀಡ್ ಗಾಂಜಾ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು.



ಪ್ರಕರಣದಲ್ಲಿ ಕಾಸರಗೋಡು ಮೂಲದ ವೈದ್ಯ ಡಾ.ನದೀರ್ ಪ್ರಮುಖ ಆರೋಪಿಯಾಗಿದ್ದು ಆತನ ಸ್ನೇಹಿತರಿಗೆ ನೀಡುವಂತೆ ಮಿನು ರಶ್ಮಿಗೆ ಸೂಚನೆ ನೀಡಲಾಗಿತ್ತು. ಅದರಂತೆ, ಗಾಂಜಾ ಸಾಗಾಟ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಡಾ. ನದೀರ್ ಸದ್ಯಕ್ಕೆ ದುಬೈನಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈಡ್ರೋವೀಡ್ ಗಾಂಜಾ ಸಾಧಾರಣ ಗಾಂಜಾಕ್ಕಿಂತ ಹತ್ತು ಪಟ್ಟು ಹೆಚ್ಚು ಅಮಲು ಬರಿಸುವ ಪದಾರ್ಥವಾಗಿದ್ದು ಇವನ್ನು ಅತಿ ಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತದೆ. ಯುರೋಪ್ ರಾಷ್ಟ್ರಗಳಲ್ಲಿ ಇದನ್ನು ನಿಯಮಿತ ಉಷ್ಣತೆಯಲ್ಲಿ ಬೆಳೆಯಲಾಗುತ್ತಿದ್ದು ಅಕ್ರಮವಾಗಿ ಭಾರತಕ್ಕೆ ತಂದು ಮಾರಾಟ ಮಾಡಲಾಗುತ್ತದೆ.
ಗಾಂಜಾ ಪತ್ತೆ ಬಗ್ಗೆ ಮಂಗಳೂರಿನ ಇಕಾನಮಿಕ್ ಅಂಡ್ ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
The Mangalore CCB Police have arrested two among one Doctor who was peddling Hydroweed Drugs worth 30 lakhs to 1 core via the internet.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm