ಬ್ರೇಕಿಂಗ್ ನ್ಯೂಸ್
04-07-21 04:30 pm Satish, Bengaluru Correspondent ಕ್ರೈಂ
ಬೆಂಗಳೂರು, ಜುಲೈ 4: 5 ಕೆಜಿ ಚಿನ್ನ, 5 ಕೇಜಿ ಬೆಳ್ಳಿ, ಕೈತುಂಬಾ ಹಣವನ್ನು ವರದಕ್ಷಿಣೆಯಾಗಿ ಕೊಟ್ಟರೂ ಸಂತೃಪ್ತನಾಗದ ಭಂಡ ಪತಿಯ ವಿರುದ್ಧ ಪತ್ನಿಯೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ಪತಿ ಮೇಲಾಗಿ ಪಿಡಬ್ಲ್ಯುಡಿ ಗುತ್ತಿಗೆದಾರನ ಪುತ್ರ. ಕೈಗೊಂದು ಕಾಲಿಗೊಂದು ಆಳು, ತಿಂದುಂಡು ಮಲಗುವಷ್ಟು ದುಡ್ಡು ಇದ್ದರೂ ತೃಪ್ತನಾಗದ ಪತಿ, ಮತ್ತೆ ಒಂದು ಕೋಟಿ ಹಣ ತರುವಂತೆ ಪೀಡಿಸಿದ್ದ. ಇದರಿಂದ ಬೇಸತ್ತ ಮಾರತ್ತಹಳ್ಳಿ ನಿವಾಸಿ 28 ವರ್ಷದ ಮಹಿಳೆ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ದೂರಿನನ್ವಯ ಪ್ರತಿಷ್ಠಿತ ಕಂಪನಿಯಲ್ಲಿ ಎಕ್ಸಿಕ್ಯೂಟಿವ್ ಆಗಿರುವ ಪತಿ ಬಾಲಾಜಿ(32) ಸೇರಿ ನಾಲ್ವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
2020 ನವೆಂಬರ್ನಲ್ಲಿ ಇವರ ಮದುವೆಯಾಗಿತ್ತು. ಬಾಲಾಜಿ ತಂದೆ ಕಲ್ಯಾಣನಗರದಲ್ಲಿ ಗುತ್ತಿಗೆದಾರ. ವಿವಾಹವಾದ 1 ತಿಂಗಳಲ್ಲೇ ಪತಿ ಮತ್ತೆ 1 ಕೋಟಿ ರೂ. ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದು, ಪತ್ನಿಗೆ ಕಿರುಕುಳ ನೀಡಲು ಆರಂಭಿಸಿದ್ದ. ಮಹಿಳೆಯ ಪಾಲಕರು ಸಾಲ ಮಾಡಿ ಮದುವೆ ಸಂದರ್ಭದಲ್ಲಿ 80 ಲಕ್ಷ ರೂ. ಹಣ ಕೊಟ್ಟಿದ್ದರು. ಆನಂತರ ಮನೆ ಕಟ್ಟಲು ಹಣ ಬೇಕೆಂದು ಬಾಕಿ 20 ಲಕ್ಷ ರೂ. ತರುವಂತೆ ಪತಿ ಆಗಾಗ ಪೀಡಿಸುತ್ತಿದ್ದ. ಇದಕ್ಕೆ ಪತ್ನಿ ನಿರಾಕರಿಸಿದಾಗ ಹಲ್ಲೆ ನಡೆಸಿ, ದೈಹಿಕ ಕಿರುಕುಳ ಕೊಟ್ಟಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಕಳೆದ ಜನವರಿಯಲ್ಲಿ ಪೊಂಗಲ್ ಹಬ್ಬಕ್ಕೆ ಹಣ ತರಲಿಲ್ಲವೆಂದು ಪತ್ನಿಯನ್ನು ಮನೆಯಿಂದಲೇ ಹೊರ ಹಾಕಿದ್ದ. ಈ ಬಗ್ಗೆ ಪತ್ನಿ ತನ್ನ ಪಾಲಕರ ಬಳಿ ಅಳಲನ್ನು ತೋಡಿಕೊಂಡಿದ್ದಳು. ಮದುವೆಗೆ ಮಾಡಿದ ಸಾಲವನ್ನೇ ಇನ್ನೂ ತೀರಿಸದ ಕಾರಣ ಮತ್ತೆ ಹಣ ಕೊಡುವುದು ಎಲ್ಲಿಂದ ಎಂದು ಪಾಲಕರು ಕೈಎತ್ತಿದ್ದರು. ನಂತರ ಸಂಬಂಧಿಕರ ಒತ್ತಾಯದ ಮೇರೆಗೆ ಪತ್ನಿಯನ್ನು ಮನೆಗೆ ಸೇರಿಸಿಕೊಂಡಿದ್ದ ಬಾಲಾಜಿ, ರೂಮ್ನಲ್ಲಿ ಕೂಡಿ ಹಾಕಿ ಆಹಾರ ಕೊಡದೆ ಹಿಂಸೆ ನೀಡುತ್ತಿದ್ದ.
ಮಗಳ ರೋದನ ಕಂಡು ಮರುಗಿದ ಪಾಲಕರು ಈ ನಡುವೆ ಮತ್ತೆ 30 ಲಕ್ಷ ರೂ. ಹಣವನ್ನು ಕೊಟ್ಟಿದ್ದರು. ಆನಂತರ ಕೆಲವು ಸಮಯ ಸುಮ್ಮನಿದ್ದ ಪತಿ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದ. ಪತ್ನಿಯ ಚಿನ್ನಾಭರಣ, ವರದಕ್ಷಿಣೆ ಹಣ ಪಡೆದು ಇದೀಗ ವಿಚ್ಛೇದನ ಕೊಡುವಂತೆ ಪತ್ನಿಗೆ ದುಂಬಾಲು ಬಿದ್ದಿದ್ದಾನೆಂದು ದೂರಲಾಗಿದೆ. ಪತಿಯ ವರ್ತನೆಯಿಂದ ನೊಂದ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
Bangalore Wife lodges dowry case as Husband demands Rs 1 crore and brutally tortures. After the wife's family have tried to settle some amount husband now is asking for a divorce for which the wife has lodged a complaint.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm