ಬ್ರೇಕಿಂಗ್ ನ್ಯೂಸ್
05-07-21 01:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 5: ನಗರದ ಬಲ್ಮಠದಲ್ಲಿರುವ ಮೇಪಲ್ ಶೋರೂಂಗೆ ಕಳ್ಳರು ನುಗ್ಗಿದ್ದು 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಐಫೋನ್, ಏಪಲ್ ಫೋನ್ ಗಳನ್ನು ಕಳವು ಮಾಡಿದ್ದಾರೆ.
ಶನಿವಾರ, ಭಾನುವಾರ ವೀಕೆಂಡ್ ಲಾಕ್ಡೌನ್ ಇದ್ದುದರಿಂದ ಇಂದು ಬೆಳಗ್ಗೆ ಶೋರೂಂ ಓಪನ್ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಹಿಂಭಾಗದ ಕಿಟಕಿಯನ್ನು ಒಡೆದು ಕಳ್ಳರು ನುಗ್ಗಿದ್ದು ಒಳಭಾಗದಲ್ಲಿ ತಡಕಾಡಿ ಲಕ್ಷಕ್ಕೂ ಹೆಚ್ಚು ಬೆಲೆಯ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.




ಶೋರೂಂ ಸಿಬಂದಿ ಇಂದು ಬೆಳಗ್ಗೆ ಬಂದು ನೋಡಿದಾಗ ಕಳವಾಗಿದ್ದು ಕಂಡುಬಂದಿದ್ದು ಕದ್ರಿ ಪೊಲೀಸರು ಬಂದು ತನಿಖೆ, ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳರು ಕೃತ್ಯದ ಬಳಿಕ ಶೋರೂಂ ಒಳಗಿದ್ದ ಸಿಸಿಟಿವಿಯ ಡಿವಿಆರ್ ಎತ್ತಿಕೊಂಡು ಹೋಗಿದ್ದಾರೆ. ಹೀಗಾಗಿ ಕಳ್ಳರು ಶೋರೂಂ ಬಗ್ಗೆ ಸಾಕಷ್ಟು ಗೊತ್ತಿರುವ ಮಂದಿಯೇ ಆಗಿರಬೇಕು ಎಂಬ ಸಂಶಯ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಇರುವ ಏಕೈಕ ಏಪಲ್, ಐಫೋನ್ ಡೀಲರ್ ಶಾಪ್ ಇದಾಗಿದ್ದು ಅತ್ಯಧಿಕ ಬೆಲೆಯ ಮೊಬೈಲ್ ಗಳು ಮಾತ್ರ ಇಲ್ಲಿರುತ್ತವೆ. ಐಫೋನ್ ಸಾಧಾರಣ ಮಟ್ಟದ್ದು ಕನಿಷ್ಠ ಅಂದ್ರೆ 70 ಸಾವಿರ ರೂ. ಮೌಲ್ಯ ಇದ್ದು ಒಂದೂವರೆ ಲಕ್ಷದ ವರೆಗೂ ಬೆಲೆಯದ್ದಿದೆ. ಹೀಗಾಗಿ ನೂರಕ್ಕೂ ಹೆಚ್ಚು ಮೊಬೈಲ್ ಕಳವಾಗಿದ್ದರೂ ಅದರ ಮೌಲ್ಯ 50ರಿಂದ 70 ಲಕ್ಷ ಆಗುತ್ತದೆ. ಈಗ ಎಷ್ಟು ಮೊಬೈಲ್ ಕಳವಾಗಿದೆ ಎಂದು ಸರಿಯಾದ ಲೆಕ್ಕ ಸಿಕ್ಕಿಲ್ಲ.


ಐದು ವರ್ಷಗಳ ಹಿಂದೆಯೂ ಕಳವು ನಡೆದಿತ್ತು !
2015 ರ ಆಗಸ್ಟ್ ನಲ್ಲಿ ಇದೇ ಏಪಲ್ ಶೋರೂಂನಿಂದ ಭಾರೀ ಪ್ರಮಾಣದ ಕಳವು ಆಗಿತ್ತು. ಅಂದು 20 ಲಕ್ಷದ ಮೊಬೈಲ್ ಗಳು ಕಳವಾಗಿದ್ದವು. ಪ್ರಕರಣವನ್ನು ಬೆನ್ನತ್ತಿದ್ದ ಸಿಸಿಬಿ ಪೊಲೀಸರು ಬಳಿಕ ನೇಪಾಳ ಮೂಲದ ನಾಲ್ವರನ್ನು ಬಂಧಿಸಿದ್ದರು. ಶೋರೂಮಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದವರೇ ಕೃತ್ಯಕ್ಕೆ ಸಾಥ್ ನೀಡಿದ್ದು ಬೆಳಕಿಗೆ ಬಂದಿತ್ತು.
Robbery in Balmatta Maple iPhone Showroom 50 lakhs worth iPhone Mobile phones stolen. Robbers flee away with CCTV Hard drive. In 2015 more than 20 lakhs worth of Mobile phones were stolen. Kadri Police and CCB have are now investigating the case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm