ಬ್ರೇಕಿಂಗ್ ನ್ಯೂಸ್
08-07-21 03:21 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 8 : ಸಬ್ಇನ್ಸ್ಪೆಕ್ಟರ್ ಹುದ್ದೆ ಕೊಡಿಸುವುದಾಗಿ ಹೇಳಿ ಆರು ಜನರಿಂದ ಒಂದು ಕೋಟಿ ರೂಪಾಯಿ ಲಂಚ ಪಡೆದು ವಂಚಿಸಿದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಎಂದು ಕೆಪಿಎಸ್ಸಿ ಹೆಸರು ಹೇಳಿಕೊಂಡು ನಂಬಿಸಿದ್ದ ಅರುಣ್ ಕುಮಾರ್ ಎಂಬಾತ ಬಂಧಿತ ವ್ಯಕ್ತಿ. ತಾನು ಪ್ರಭಾವಿ ವ್ಯಕ್ತಿಯೆಂದೂ, ಎಸ್ಐ ಹುದ್ದೆ ಕೊಡಿಸುವೆನೆಂದೂ ಹೇಳಿ ಲಂಚ ಪಡೆದಿದ್ದ. ಆತನನ್ನು ನಂಬಿದ್ದ ಆರು ಜನ ಒಟ್ಟು ಒಂದು ಕೋಟಿ ರೂಪಾಯಿ ನೀಡಿದ್ದರು.
ಈ ಬಗ್ಗೆ ಮೋಸ ಹೋದ ದಾವಣಗೆರೆಯ ಬಿ.ಜಯದೇವ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಕೆ.ಹೆಚ್.ಅರುಣ್ ಕುಮಾರ್ ಮಾತನ್ನು ನಂಬಿ ಜಯದೇವ ಅವರ ಸ್ನೇಹಿತರಾದ ಲಕ್ಷ್ಮಪ್ಪ ಮತ್ತು ಚಂದ್ರಪ್ಪ ಎಂಬ ಇಬ್ಬರು ಎಸ್ಐ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ತನಗೆ ಎಲ್ಲರ ಲಿಂಕ್ ಇದೆ ಎಂದು ಹೇಳಿಕೊಂಡಿದ್ದ ಅರುಣ್ ಕುಮಾರ್, ಸ್ನೇಹಿತರಿಗೆ ಎಸ್ಐ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿ 70 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ.

2020ನೇ ಇಸವಿಯ ಜನವರಿ 30ರಂದು 15 ಲಕ್ಷ ರೂ. ಹಣ ವರ್ಗಾವಣೆ ಮಾಡಿಸಿಕೊಂಡಿದ್ದ ಅರುಣ್ ಕುಮಾರ್, ಕೆಲ ದಿನಗಳ ನಂತರ ಮತ್ತೆ 20 ಲಕ್ಷ ರೂಪಾಯಿ ಹಣವನ್ನು ತರಿಸಿಕೊಂಡಿದ್ದ. ಇಷ್ಟು ಕೊಟ್ಟ ನಂತರವೂ ಮತ್ತೆ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಇದೇ ರೀತಿ ಒಟ್ಟು 6 ಜನರಿಗೆ ಮೋಸ ಮಾಡಿದ್ದ ಆತ ಒಂದು ಕೋಟಿ ರೂಪಾಯಿಗೂ ಹೆಚ್ಚು ವಂಚಿಸಿದ್ದಾನೆ ಎಂಬ ಆರೋಪಗಳಿವೆ.
ಈ ಬಗ್ಗೆ ದೂರು ದಾಖಲಿಸಿದ್ದ ದಾವಣಗೆರೆಯ ಬಿ.ಜಯದೇವ ಎನ್ನುವವರು ಅರುಣ್ ಕುಮಾರ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ಅರುಣ್ ಕುಮಾರ್ನನ್ನು ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಆತನನ್ನು ವಿಧಾನಸೌಧ ಪೊಲೀಸರಿಗೆ ಹಸ್ತಾಂತರ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Bangalore CCB Police have succeeded in arresting a person who was cheating people of giving Sub Inspector Job in the Police department. The arrested has been identified as Arun Kumar.
20-03-26 10:03 am
HK News Staffer
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm