ಬ್ರೇಕಿಂಗ್ ನ್ಯೂಸ್
08-07-21 03:21 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 8 : ಸಬ್ಇನ್ಸ್ಪೆಕ್ಟರ್ ಹುದ್ದೆ ಕೊಡಿಸುವುದಾಗಿ ಹೇಳಿ ಆರು ಜನರಿಂದ ಒಂದು ಕೋಟಿ ರೂಪಾಯಿ ಲಂಚ ಪಡೆದು ವಂಚಿಸಿದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಎಂದು ಕೆಪಿಎಸ್ಸಿ ಹೆಸರು ಹೇಳಿಕೊಂಡು ನಂಬಿಸಿದ್ದ ಅರುಣ್ ಕುಮಾರ್ ಎಂಬಾತ ಬಂಧಿತ ವ್ಯಕ್ತಿ. ತಾನು ಪ್ರಭಾವಿ ವ್ಯಕ್ತಿಯೆಂದೂ, ಎಸ್ಐ ಹುದ್ದೆ ಕೊಡಿಸುವೆನೆಂದೂ ಹೇಳಿ ಲಂಚ ಪಡೆದಿದ್ದ. ಆತನನ್ನು ನಂಬಿದ್ದ ಆರು ಜನ ಒಟ್ಟು ಒಂದು ಕೋಟಿ ರೂಪಾಯಿ ನೀಡಿದ್ದರು.
ಈ ಬಗ್ಗೆ ಮೋಸ ಹೋದ ದಾವಣಗೆರೆಯ ಬಿ.ಜಯದೇವ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಕೆ.ಹೆಚ್.ಅರುಣ್ ಕುಮಾರ್ ಮಾತನ್ನು ನಂಬಿ ಜಯದೇವ ಅವರ ಸ್ನೇಹಿತರಾದ ಲಕ್ಷ್ಮಪ್ಪ ಮತ್ತು ಚಂದ್ರಪ್ಪ ಎಂಬ ಇಬ್ಬರು ಎಸ್ಐ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ತನಗೆ ಎಲ್ಲರ ಲಿಂಕ್ ಇದೆ ಎಂದು ಹೇಳಿಕೊಂಡಿದ್ದ ಅರುಣ್ ಕುಮಾರ್, ಸ್ನೇಹಿತರಿಗೆ ಎಸ್ಐ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿ 70 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ.

2020ನೇ ಇಸವಿಯ ಜನವರಿ 30ರಂದು 15 ಲಕ್ಷ ರೂ. ಹಣ ವರ್ಗಾವಣೆ ಮಾಡಿಸಿಕೊಂಡಿದ್ದ ಅರುಣ್ ಕುಮಾರ್, ಕೆಲ ದಿನಗಳ ನಂತರ ಮತ್ತೆ 20 ಲಕ್ಷ ರೂಪಾಯಿ ಹಣವನ್ನು ತರಿಸಿಕೊಂಡಿದ್ದ. ಇಷ್ಟು ಕೊಟ್ಟ ನಂತರವೂ ಮತ್ತೆ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಇದೇ ರೀತಿ ಒಟ್ಟು 6 ಜನರಿಗೆ ಮೋಸ ಮಾಡಿದ್ದ ಆತ ಒಂದು ಕೋಟಿ ರೂಪಾಯಿಗೂ ಹೆಚ್ಚು ವಂಚಿಸಿದ್ದಾನೆ ಎಂಬ ಆರೋಪಗಳಿವೆ.
ಈ ಬಗ್ಗೆ ದೂರು ದಾಖಲಿಸಿದ್ದ ದಾವಣಗೆರೆಯ ಬಿ.ಜಯದೇವ ಎನ್ನುವವರು ಅರುಣ್ ಕುಮಾರ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ಅರುಣ್ ಕುಮಾರ್ನನ್ನು ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಆತನನ್ನು ವಿಧಾನಸೌಧ ಪೊಲೀಸರಿಗೆ ಹಸ್ತಾಂತರ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Bangalore CCB Police have succeeded in arresting a person who was cheating people of giving Sub Inspector Job in the Police department. The arrested has been identified as Arun Kumar.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm