ಬ್ರೇಕಿಂಗ್ ನ್ಯೂಸ್
09-07-21 05:40 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಪಿಎಚ್ ಡಿ ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿಸಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.
ಪಿಹೆಚ್ಡಿ ವಿದ್ಯಾರ್ಥಿನಿ ಪ್ರೇಮ ಡಿ'ಸೋಜ ಎಂಬವರಿಂದ ಅವರ ಪ್ರಬಂಧ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಆಗಮಿಸುವ ಮೌಲ್ಯ ಮಾಪಕರ ಖರ್ಚು ಸೇರಿ ರೂ. 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. 2012ರ ಡಿಸೆಂಬರ್ 4 ರಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ರೂ. 5,000 ಮುಂಗಡ ಹಣ ಸ್ವೀಕರಿಸುತ್ತಿದ್ದಾಗಲೇ ಪ್ರೊಫೆಸರ್ ಅನಿತಾ ರವಿಶಂಕರ್ ಅವರನ್ನು ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ಬಂಧಿಸಿದ್ದರು.
ಸದ್ರಿ ಆರೋಪಿ ಮೊದಲು ರೂ. 10,000, ನಂತರ ರೂ.4,000, ಮತ್ತು ಬಳಿಕ ರೂ. 16,800 ನೀಡುವಂತೆ ವಿದ್ಯಾರ್ಥಿನಿ ಬಳಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳ ಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 7ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
Mangalore university Professor takes Bribes to earn students pass PhD court sentences, Anitha Ravishankar, to a five-year jail term.
29-06-25 04:49 pm
Sponsored - Grace Ministry
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 04:26 pm
HK News Desk
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm