ಬ್ರೇಕಿಂಗ್ ನ್ಯೂಸ್
09-07-21 05:40 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಪಿಎಚ್ ಡಿ ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿಸಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.
ಪಿಹೆಚ್ಡಿ ವಿದ್ಯಾರ್ಥಿನಿ ಪ್ರೇಮ ಡಿ'ಸೋಜ ಎಂಬವರಿಂದ ಅವರ ಪ್ರಬಂಧ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಆಗಮಿಸುವ ಮೌಲ್ಯ ಮಾಪಕರ ಖರ್ಚು ಸೇರಿ ರೂ. 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. 2012ರ ಡಿಸೆಂಬರ್ 4 ರಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ರೂ. 5,000 ಮುಂಗಡ ಹಣ ಸ್ವೀಕರಿಸುತ್ತಿದ್ದಾಗಲೇ ಪ್ರೊಫೆಸರ್ ಅನಿತಾ ರವಿಶಂಕರ್ ಅವರನ್ನು ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ಬಂಧಿಸಿದ್ದರು.

ಸದ್ರಿ ಆರೋಪಿ ಮೊದಲು ರೂ. 10,000, ನಂತರ ರೂ.4,000, ಮತ್ತು ಬಳಿಕ ರೂ. 16,800 ನೀಡುವಂತೆ ವಿದ್ಯಾರ್ಥಿನಿ ಬಳಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳ ಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 7ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
Mangalore university Professor takes Bribes to earn students pass PhD court sentences, Anitha Ravishankar, to a five-year jail term.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm