ಬ್ರೇಕಿಂಗ್ ನ್ಯೂಸ್
09-07-21 05:40 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಪಿಎಚ್ ಡಿ ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿಸಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.
ಪಿಹೆಚ್ಡಿ ವಿದ್ಯಾರ್ಥಿನಿ ಪ್ರೇಮ ಡಿ'ಸೋಜ ಎಂಬವರಿಂದ ಅವರ ಪ್ರಬಂಧ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಆಗಮಿಸುವ ಮೌಲ್ಯ ಮಾಪಕರ ಖರ್ಚು ಸೇರಿ ರೂ. 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. 2012ರ ಡಿಸೆಂಬರ್ 4 ರಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ರೂ. 5,000 ಮುಂಗಡ ಹಣ ಸ್ವೀಕರಿಸುತ್ತಿದ್ದಾಗಲೇ ಪ್ರೊಫೆಸರ್ ಅನಿತಾ ರವಿಶಂಕರ್ ಅವರನ್ನು ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ಬಂಧಿಸಿದ್ದರು.

ಸದ್ರಿ ಆರೋಪಿ ಮೊದಲು ರೂ. 10,000, ನಂತರ ರೂ.4,000, ಮತ್ತು ಬಳಿಕ ರೂ. 16,800 ನೀಡುವಂತೆ ವಿದ್ಯಾರ್ಥಿನಿ ಬಳಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳ ಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 7ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
Mangalore university Professor takes Bribes to earn students pass PhD court sentences, Anitha Ravishankar, to a five-year jail term.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm