ಬ್ರೇಕಿಂಗ್ ನ್ಯೂಸ್
09-07-21 05:40 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಪಿಎಚ್ ಡಿ ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿಸಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.
ಪಿಹೆಚ್ಡಿ ವಿದ್ಯಾರ್ಥಿನಿ ಪ್ರೇಮ ಡಿ'ಸೋಜ ಎಂಬವರಿಂದ ಅವರ ಪ್ರಬಂಧ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಆಗಮಿಸುವ ಮೌಲ್ಯ ಮಾಪಕರ ಖರ್ಚು ಸೇರಿ ರೂ. 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. 2012ರ ಡಿಸೆಂಬರ್ 4 ರಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ರೂ. 5,000 ಮುಂಗಡ ಹಣ ಸ್ವೀಕರಿಸುತ್ತಿದ್ದಾಗಲೇ ಪ್ರೊಫೆಸರ್ ಅನಿತಾ ರವಿಶಂಕರ್ ಅವರನ್ನು ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ಬಂಧಿಸಿದ್ದರು.

ಸದ್ರಿ ಆರೋಪಿ ಮೊದಲು ರೂ. 10,000, ನಂತರ ರೂ.4,000, ಮತ್ತು ಬಳಿಕ ರೂ. 16,800 ನೀಡುವಂತೆ ವಿದ್ಯಾರ್ಥಿನಿ ಬಳಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳ ಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 7ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
Mangalore university Professor takes Bribes to earn students pass PhD court sentences, Anitha Ravishankar, to a five-year jail term.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm