ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm