ಬ್ರೇಕಿಂಗ್ ನ್ಯೂಸ್
10-07-21 11:11 am Headline Karnataka News Network ಕ್ರೈಂ
ಮೈಸೂರು, ಜುಲೈ 10: ನಗರದ ಕೆ.ಆರ್. ಆಸ್ಪತ್ರೆಯ ವಾರ್ಡ್ ನಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಇದೀಗ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಹೊಳ ನುಗ್ಗಿ 30 ವರ್ಷದ ಬುದ್ದಿಮಾಂದ್ಯ ಮಹಿಳೆ ಮೇಲೆ ಅಮಾನುಷ ಕೃತ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ, ಪ್ರಕರಣದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದ್ದ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಹೇಯ ಘಟನೆಯೂ ಇದೀಗ ಚರ್ಚೆಗೆ ಕಾರಣವಾಗಿದೆ.
ರಾತ್ರಿ ವೇಳೆ ಕಾಮುಕ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗಿರುವ ವೃದ್ದೆ ವಾರದ ಹಿಂದೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಅಲ್ಲದೆ, ಮಾಹಿತಿ ನೀಡಿದ ವೃದ್ದೆಯ ಮೇಲೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿಗಳು ಬೆದರಿಕೆ ಹಾಕಿದ್ದಾರೆ. ಈ ಮೂಲಕ ಅತ್ಯಾಚಾರ ಪ್ರಕರಣವನ್ನೇ ಮುಚ್ಚಿ ಹಾಕಲು ಯತ್ನಿಸಿದ್ದಾರೆ.

ಆದರೆ, ಕೊನೆಗೆ ಮಾನವ ಹಕ್ಕುಗಳ ಸೇವಾ ಸಮಿತಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೆಳಕಿಗೆ ತಂದಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಆಸ್ಪತ್ರೆಗೆ ದೌಡಾಯಿಸಿದ ದೇವರಾಜ ಪೊಲೀಸ್ ಠಾಣೆ ಅಧಿಕಾರಿಗಳು ಈ ಬಗ್ಗೆ ಕೇಸ್ ದಾಖಲಿಸಿದ್ದಾರೆ. ಆದರೆ, ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.
ಪೊಲೀಸರು ಬಂದರೂ ಸಹ ವೈದ್ಯರು ಹಾಗೂ ನರ್ಸ್ಗಳು ಪರಿಶೀಲನಾ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಅಮಾನವೀಯ ಕೃತ್ಯ ಕೇಳಿ ನೆರೆ ಹೊರೆ ವಾರ್ಡ್ ನ ರೋಗಿಗಳ ಪೋಷಕರು ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಆದರೆ, ಈ ಪೈಶಾಚಿಕ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
A mentally challenged woman has been allegedly raped in K R Hospital in Mysore.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm