ಬ್ರೇಕಿಂಗ್ ನ್ಯೂಸ್
10-07-21 11:11 am Headline Karnataka News Network ಕ್ರೈಂ
ಮೈಸೂರು, ಜುಲೈ 10: ನಗರದ ಕೆ.ಆರ್. ಆಸ್ಪತ್ರೆಯ ವಾರ್ಡ್ ನಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಇದೀಗ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಹೊಳ ನುಗ್ಗಿ 30 ವರ್ಷದ ಬುದ್ದಿಮಾಂದ್ಯ ಮಹಿಳೆ ಮೇಲೆ ಅಮಾನುಷ ಕೃತ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ, ಪ್ರಕರಣದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದ್ದ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಹೇಯ ಘಟನೆಯೂ ಇದೀಗ ಚರ್ಚೆಗೆ ಕಾರಣವಾಗಿದೆ.
ರಾತ್ರಿ ವೇಳೆ ಕಾಮುಕ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗಿರುವ ವೃದ್ದೆ ವಾರದ ಹಿಂದೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಅಲ್ಲದೆ, ಮಾಹಿತಿ ನೀಡಿದ ವೃದ್ದೆಯ ಮೇಲೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿಗಳು ಬೆದರಿಕೆ ಹಾಕಿದ್ದಾರೆ. ಈ ಮೂಲಕ ಅತ್ಯಾಚಾರ ಪ್ರಕರಣವನ್ನೇ ಮುಚ್ಚಿ ಹಾಕಲು ಯತ್ನಿಸಿದ್ದಾರೆ.

ಆದರೆ, ಕೊನೆಗೆ ಮಾನವ ಹಕ್ಕುಗಳ ಸೇವಾ ಸಮಿತಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೆಳಕಿಗೆ ತಂದಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಆಸ್ಪತ್ರೆಗೆ ದೌಡಾಯಿಸಿದ ದೇವರಾಜ ಪೊಲೀಸ್ ಠಾಣೆ ಅಧಿಕಾರಿಗಳು ಈ ಬಗ್ಗೆ ಕೇಸ್ ದಾಖಲಿಸಿದ್ದಾರೆ. ಆದರೆ, ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.
ಪೊಲೀಸರು ಬಂದರೂ ಸಹ ವೈದ್ಯರು ಹಾಗೂ ನರ್ಸ್ಗಳು ಪರಿಶೀಲನಾ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಅಮಾನವೀಯ ಕೃತ್ಯ ಕೇಳಿ ನೆರೆ ಹೊರೆ ವಾರ್ಡ್ ನ ರೋಗಿಗಳ ಪೋಷಕರು ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಆದರೆ, ಈ ಪೈಶಾಚಿಕ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
A mentally challenged woman has been allegedly raped in K R Hospital in Mysore.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm