ಬ್ರೇಕಿಂಗ್ ನ್ಯೂಸ್
11-07-21 09:34 pm Bengaluru Correspondent ಕ್ರೈಂ
ಮೈಸೂರು, ಜುಲೈ 11: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರು ಬಳಸಿಕೊಂಡು ಪೋರ್ಜರಿ ದಾಖಲೆ ಸೃಷ್ಟಿಸಿ ಬ್ಯಾಂಕಿಗೆ ವಂಚಿಸುವ ಪ್ರಯತ್ನ ನಡೆದಿದ್ದು ಬೆಳಕಿಗೆ ಬಂದಿದ್ದು ಮಹಿಳೆಯೊಬ್ಬಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಖುದ್ದು ನಟ ದರ್ಶನ್ ಅವರನ್ನೂ ಕರೆಸಿಕೊಂಡು ಪೊಲೀಸರು ಹೇಳಿಕೆ ದಾಖಲಿಸಿದ್ದಾರೆ.
ನಟ ದರ್ಶನ್ ಹೆಸರಲ್ಲಿ ಫೋರ್ಜರಿ ದಾಖಲೆ ಸೃಷ್ಟಿಸಿ, ಅವರ ಅಭಿಮಾನಿಗಳ ಹೆಸರಲ್ಲಿ 25 ಕೋಟಿ ರೂ. ಬ್ಯಾಂಕ್ ಸಾಲ ಪಡೆಯಲು ಪ್ರಯತ್ನ ನಡೆದಿದೆ ಎನ್ನೋದು ಮೇಲ್ನೋಟಕ್ಕೆ ತಿಳಿದುಬಂದಿದೆ. ಇದೇ ತಿಂಗಳು ಮೂರರಂದು ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ನಟ ದರ್ಶನ್ ಆಪ್ತ ಹರ್ಷ ಮೇಲಂಟ ದೂರು ನೀಡಿದ್ದರು. ಬೆಂಗಳೂರು ಮೂಲದ ಅರುಣಾ ಕುಮಾರಿ ಅನ್ನೋ ಮಹಿಳೆ, ತಾವೊಬ್ಬ ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು ಮೈಸೂರಿನಲ್ಲಿ ದರ್ಶನ್ ಸ್ನೇಹಿತರನ್ನು ಭೇಟಿ ಮಾಡಿದ್ದು ದರ್ಶನ್ ಅವರ ದಾಖಲೆ ಫೋರ್ಜರಿ ಮಾಡಿದ್ದೀರಾ ಅಂತ ಕೇಳಿದ್ದಾರೆ. ನಾವು ಯಾವುದೇ ಲೋನ್ ಗೆ ಅರ್ಜಿ ಹಾಕಿಲ್ಲ ಎಂದು ಹರ್ಷ ಹೇಳಿದ್ದರು. ಜತೆಗೆ ಮಹಿಳೆ ಅರುಣ ಕುಮಾರಿ ಫೋರ್ಜರಿ ದಾಖಲೆ ನೀಡಲು ಹರ್ಷ ಅನ್ನುವವರ ಬಳಿ 25 ಲಕ್ಷ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಪ್ರಕರಣ ಸಂಬಂಧ ಹರ್ಷ ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ದೂರು ದಾಖಲಿಸಿದ್ದರು.

ಈ ನಡುವೆ, ಪ್ರಕರಣದ ಬಗ್ಗೆ ತಿಳಿದು ಮೈಸೂರಿನ ಎಸಿಪಿ ಕಚೇರಿಗೆ ಆಗಮಿಸಿ ನಟ ದರ್ಶನ್ ಮಾಹಿತಿ ಪಡೆದುಕೊಂಡಿದ್ದಾರೆ.
ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ದರ್ಶನ್, ನನ್ನ ದಾಖಲೆ ಫೋರ್ಜರಿ ಆಗಿದೆ ಅಂತ ತಿಳಿದು ಎಸಿಪಿ ಕಚೇರಿಗೆ ಬಂದಿದ್ದೇನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಮಹಿಳೆ ನಕಲಿ ಬ್ಯಾಂಕ್ ಅಧಿಕಾರಿ ಅಂತಾನೂ ಗೊತ್ತಾಗಿದೆ. ಒಂದು ವೇಳೆ ತನ್ನ ಜೊತೆಗಿದ್ದವ್ರೆ ಈ ಷಡ್ಯಂತ್ರ ಮಾಡಿದ್ದಾರೆ ಅನ್ನೋದು ಗೊತ್ತಾದ್ರೆ ಅವರ ತಲೆಯನ್ನೇ ತಗೆಯುತ್ತೇನೆ ಅಂತ ವಾರ್ನ್ ಮಾಡಿದ್ದಾರೆ.
ಪ್ರಕರಣದಲ್ಲಿ ನಿರ್ಮಾಪಕ ಉಮಾಪತಿಯೇ ಈ ನಕಲಿ ಬ್ಯಾಂಕ್ ಅಧಿಕಾರಿಯನ್ನು ನಟ ದರ್ಶನ್ ಸ್ನೇಹಿತರಿಗೆ ಪರಿಚಯ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಆಪ್ತರಾಗಿರೋ ಮೈಸೂರಿನ ರಾಕೇಶ್ ಪಾಪಣ್ಣ, ಹರ್ಷ ಮೆಲಂಟಾ ಅವರನ್ನು ದರ್ಶನ್ ಅವರಿಂದ ದೂರ ಮಾಡಲು ನಕಲಿ ಬ್ಯಾಂಕ್ ಅಧಿಕಾರಿ ಸೃಷ್ಟಿ ಮಾಡಿದ್ದಾರೆಯೇ ಅನ್ನುವ ಅನುಮಾನ ಕೇಳಿಬಂದಿದೆ. ಪೊಲೀಸರ ವಿಚಾರಣೆಯಲ್ಲಿ ಮಹಿಳೆ ಅರುಣಾ ಕುಮಾರಿ, ನಿರ್ಮಾಪಕ ಉಮಾಪತಿ ಹೆಸರು ಹೇಳಿದ್ದಾಳೆ. ಹೀಗಾಗಿ ಉಮಾಪತಿಯನ್ನು ಕೂಡ ಪೊಲೀಸರು ವಿಚಾರಣೆಗೆ ಕರೆದಿದ್ದರು.
ಪ್ರಕರಣದ ಬಗ್ಗೆ ವಿವರ ನೀಡಲು ಡಿಸಿಪಿ ಪ್ರದೀಪ್ ಗುಂಟಿ ನಿರಾಕರಿಸಿದ್ದಾರೆ. ಆಸ್ತಿಗೆ ಸಂಬಂಧಪಟ್ಟ ನಕಲಿ ದಾಖಲೆ ಸೃಷ್ಟಿಸಿ, ಲೋನ್ ಕೊಡಿಸುವ ನೆಪದಲ್ಲಿ ವಂಚನೆಗೆ ಪ್ರಯತ್ನ ಮಾಡಲಾಗಿದೆ. ಇದುವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದಿದ್ದಾರೆ.
Kannada Actor Darshan name Misused to create Fake documents by Woman bank Manager. She had plotted to take a loan of 25 cores by suing fake forgery documents in the name of Actor. A case has been registered the Hebbal Police station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm