ಬ್ರೇಕಿಂಗ್ ನ್ಯೂಸ್
12-07-21 05:45 pm Headline Karnataka News Network ಕ್ರೈಂ
ಕಣ್ಣೂರು, ಜುಲೈ 12: 40 ವರ್ಷದ ಮಹಿಳೆಯೊಬ್ಬರನ್ನು ಲಾಡ್ಜ್ ನಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ, ಬೀಯರ್ ಬಾಟಲಿಗಳಿಂದ ಗುಪ್ತಾಂಗಕ್ಕೆ ತುರುಕಿಸಿ ಹಲ್ಲೆ ನಡೆಸಿರುವ ಪೈಶಾಚಿಕ ಘಟನೆ ತಮಿಳುನಾಡಿನ ಪಳನಿಯಲ್ಲಿ ನಡೆದಿದೆ ಎನ್ನಲಾಗುತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಹಿಳೆ ಮತ್ತು ಆಕೆಯ ಗಂಡ ತೀರ್ಥಕ್ಷೇತ್ರ ದರ್ಶನಕ್ಕಾಗಿ ಜೂನ್ 19ರಂದು ಪಳನಿಗೆ ತೆರಳಿದ್ದು ಅಲ್ಲಿನ ಲಾಡ್ಜ್ ಒಂದರಲ್ಲಿ ತಂಗಿದ್ದರು. ಈ ವೇಳೆ, ಗಂಡ ಆಹಾರ ತರುವುದಕ್ಕಾಗಿ ಹೊರಗೆ ಹೋಗಿದ್ದ ವೇಳೆ ಮಹಿಳೆಯ ಮೇಲೆರಗಿದ ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅದರಲ್ಲಿ ಲಾಡ್ಜ್ ಮ್ಯಾನೇಜರ್ ಕೂಡ ಸೇರಿದ್ದಾನೆ. ಬಳಿಕ ಗಂಡ ಮರಳಿದಾಗ ಆತನ ಮೇಲೂ ಹಲ್ಲೆ ನಡೆಸಿದ್ದಾರೆ.

ಮೂರು ದಿನಗಳ ಬಳಿಕ ದಂಪತಿ ಕೇರಳದ ಕಣ್ಣೂರಿಗೆ ಆಗಮಿಸಿದ್ದು, ಇಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಕಣ್ಣೂರು ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ. ಮಹಿಳೆ ಬಳಿಕ ತನಗಾದ ಅನ್ಯಾಯದ ಬಗ್ಗೆ ಕೇರಳ ಡಿಜಿಪಿಗೆ ದೂರು ನೀಡಿದ್ದು, ಪ್ರಕರಣದ ತನಿಖೆಗೆ ಆದೇಶ ನೀಡಲಾಗಿದೆ. ಎರಡು ವಾರದ ಬಳಿಕ ಮಹಿಳೆಯನ್ನು ಕಣ್ಣೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಪರೀಕ್ಷೆ ನಡೆಸಲಾಗಿದೆ. ಆದರೆ, ಪರೀಕ್ಷೆ ವೇಳೆ ಹಲ್ಲೆ ನಡೆಸಿರುವುದಕ್ಕೆ ಸಾಕ್ಷ್ಯವಾಗಿ ಯಾವುದೇ ಗುರುತು ಕಂಡುಬಂದಿಲ್ಲ. ಹಲವು ದಿನಗಳು ಆಗಿರುವುದರಿಂದ ಹಲ್ಲೆ ಗಾಯ ಮಾಸಿರಬಹುದು. ಈ ಬಗ್ಗೆ ಪಳನಿ ಪೊಲೀಸರಿಗೆ ತಿಳಿಸಿದ್ದು ಮಾಹಿತಿ ಸಂಗ್ರಹಿಸಿದ್ದೇವೆ ಎಂದು ತಲಶ್ಶೇರಿ ಡಿವೈಎಸ್ಪಿ ಮೂಸಾ ವಲ್ಲಿಕಾಡನ್ ತಿಳಿಸಿದ್ದಾರೆ.
ಪಳನಿ ಪೊಲೀಸರಿಗೆ ಈ ಮಾಹಿತಿ ನೀಡಲಾಗಿದ್ದು, ಅವರು ಅಲ್ಲಿನ ಹೊಟೇಲ್ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿಯಲ್ಲಿ ಜೂನ್ 19ರಂದು ಹೊಟೇಲಿಗೆ ಬಂದಿರುವುದು ದಾಖಲಾಗಿದ್ದಾಗಿ ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಸದ್ಯ ಮಹಿಳೆಯನ್ನು ಕಣ್ಣೂರಿನ ಪೆರಿಯಾರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದಂಪತಿ ಮೂಲತಃ ತಮಿಳುನಾಡಿನವರೇ ಆಗಿದ್ದು, ಉದ್ಯೋಗ ನಿಮಿತ್ತ ಕಣ್ಣೂರಿನಲ್ಲಿ ನೆಲೆಸಿದ್ದರು. ದೇವಸ್ಥಾನಕ್ಕೆಂದು ಪಳನಿಗೆ ತೆರಳಿದ್ದ ವೇಳೆ ಕಾಮುಕರು ಕೃತ್ಯ ಎಸಗಿದ್ದಾರೆ ಎಂದು ಆರೋಪ ಕೇಳಿಬಂದಿದೆ.
A 40-year-old woman from Kannur district has lodged a complaint with Kerala’s Director-General of Police that she was gang-raped by some persons at a lodge in Palani in Dindigul district last month. But the Tamil Nadu police said no such complaint had been received in Palani.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm