ಬ್ರೇಕಿಂಗ್ ನ್ಯೂಸ್
13-07-21 11:33 am Udupi Correspondent ಕ್ರೈಂ
ಉಡುಪಿ, ಜುಲೈ 13: ಅಪಾರ್ಟ್ಮೆಂಟ್ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಬ್ರಹ್ಮಾವರದಲ್ಲಿ ನಡೆದಿದ್ದು ಹಣ ಮತ್ತು ಚಿನ್ನಕ್ಕಾಗಿ ಕೊಲೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಕೊಲೆಯಾದ ಮಹಿಳೆ ಗಂಗೊಳ್ಳಿಯ ನಾಯಕವಾಡಿ ಜನತಾ ಕಾಲನಿ ನಿವಾಸಿ ವಿಶಾಲ ಗಾಣಿಗ(35) ಎಂಬವರಾಗಿದ್ದು ಕುತ್ತಿಗೆಗೆ ವಯರ್ ಬಿಗಿದು ಕೊಲೆ ಮಾಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಕೊಲೆಯಾದ ಮಹಿಳೆ ಕೆಲವು ದಿನಗಳ ಹಿಂದೆಯಷ್ಟೆ ವಿದೇಶದಿಂದ ಆಗಮಿಸಿದ್ದರು ಎನ್ನಲಾಗಿದೆ.
ಪತಿ ರಾಮಕೃಷ್ಣ ಜತೆ ವಿದೇಶದಲ್ಲಿದ್ದ ವಿಶಾಲಾ ಅವರು, 10 ದಿನಗಳ ಹಿಂದಷ್ಟೇ ಮಗು ಜತೆ ಊರಿಗೆ ಬಂದಿದ್ದರು. ದಂಪತಿ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಹೊಂದಿದ್ದು, ಊರಿಗೆ ಬಂದಾಗ ಇಲ್ಲಿರುತ್ತಿದ್ದರು. ಈ ಬಾರಿ ತಂದೆ- ತಾಯಿ ಜತೆ ವಿಶಾಲಾ ಫ್ಲ್ಯಾಟ್ನಲ್ಲಿ ಇದ್ದರು. ಸೋಮವಾರ ಮಧ್ಯಾಹ್ನ ವಿಶಾಲಾ ತಂದೆ, ತಾಯಿ ಹಾಗೂ ಮಗು ಜತೆ ರಿಕ್ಷಾದಲ್ಲಿ ನಾಯಕವಾಡಿಯ ಮನೆಗೆ ತೆರಳಿದ್ದರು. ನಂತರ ಬ್ಯಾಂಕ್ನಲ್ಲಿ ಕೆಲಸವಿದೆ ಎಂದು ಮಹಿಳೆ ಒಬ್ಬರೇ ಹಿಂತಿರುಗಿದ್ದರು. ಸಾಯಂಕಾಲ 3 ಗಂಟೆಯಾದರೂ ಮಗಳು ಹಿಂದಿರುಗದ ಕಾರಣ, ತಂದೆ ಫ್ಲ್ಯಾಟ್ಗೆ ತೆರಳಿ ನೋಡಿದಾಗ ಬೀಗ ಹಾಕಿದ್ದು ಕಂಡುಬಂದಿದೆ. ಬಳಿಕ ಬೇರೊಂದು ಕೀಯಿಂದ ಬೀಗ ತೆರೆದು ನೋಡಿದಾಗ ವಿಶಾಲಾ ಬೆಡ್ ರೂಮಿನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


'


ಕೂಡಲೇ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಹೆತ್ತವರ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ. ಅವರಿಗೆ ಬೇರಾವುದೇ ಮಾಹಿತಿ ಇರಲಿಲ್ಲ. ಆಟೋದಲ್ಲಿ ಮನೆಗೆ ಹಿಂತಿರುಗಿ ಬಂದಿದ್ದಳು ಎನ್ನೋ ವಿಚಾರವನ್ನು ತಿಳಿಸಿದ್ದರು. ಅದರಂತೆ, ಆಕೆ ಪ್ರಯಾಣಿಸಿದ್ದ ಆಟೋರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿದೇಶದಲ್ಲಿ ನೆಲೆಸಿದ್ದ ಮಹಿಳೆಯ ಬಳಿ ಸಾಕಷ್ಟು ಹಣ ಮತ್ತು ಚಿನ್ನ ಇರಬಹುದೆಂದು ಆಟೋ ಚಾಲಕನೇ ಕೃತ್ಯ ಎಸಗಿದ್ದಾನೆಯೇ, ಬೇರಾವುದೇ ಕೈವಾಡ ಇರಬಹುದೇ ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Video:
35-year-old woman found murdered in her apartment at Brahmavar in Udupi. The deceased has been identified as Vishala Ganiga (35). As per primary sources, although the killing happened on Sunday, the news broke out on Monday.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm