ಬ್ರೇಕಿಂಗ್ ನ್ಯೂಸ್
20-07-21 02:44 pm Mangalore Correspondent ಕ್ರೈಂ
ಮಂಗಳೂರು, ಜುಲೈ 20: ಆಂಬುಲೆನ್ಸ್ ವಾಹನ ಸಾಗುತ್ತಿದ್ದಾಗ ಅಡ್ಡಾದಿಡ್ಡಿ ಕಾರು ಚಲಾಯಿಸಿ, ತುರ್ತು ಅಗತ್ಯದ ರೋಗಿಯ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕಾರು ಚಾಲಕ ಮತ್ತು ವಾಹನವನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಕುಂಪಲ ನಿವಾಸಿ ಚರಣ್ ರಾಜ್ ಎಸ್. (31) ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಿಂದ ಮಂಗಳೂರಿನ ನಗರದ ಆಸ್ಪತ್ರೆಗೆ ತುರ್ತು ಅಗತ್ಯದ ರೋಗಿಯನ್ನು ಆಂಬುಲೆನ್ಸ್ ನಲ್ಲಿ ತರುತ್ತಿದ್ದಾಗ ದೇರಳಕಟ್ಟೆಯಿಂದ ತೊಕ್ಕೊಟ್ಟು ಹೆದ್ದಾರಿ ಮೂಲಕ ಮಂಗಳೂರಿನ ಎಕ್ಕೂರು ವರೆಗೂ ಕಾರು ಚಾಲಕ ಸಂಚಾರಕ್ಕೆ ಅಡ್ಡಿಪಡಿಸಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಆಂಬುಲೆನ್ಸ್ ನಲ್ಲಿದ್ದವರೇ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾರಿನ ನಂಬರ್ (ಕೆಎ 19 ಎಂಜೆ 8924) ಸ್ಪಷ್ಟವಾಗಿ ದಾಖಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕ್ರಮ ಜರುಗಿಸಿದ್ದಾರೆ.







ಅಡ್ಡಾದಿಡ್ಡಿ ಚಲಾಯಿಸಿದ್ದ ಎರ್ಟಿಕಾ ಕಾರನ್ನು ವಶಕ್ಕೆ ಪಡೆದು, ಕಂಕನಾಡಿ ನಗರ ಸಂಚಾರಿ ಠಾಣೆಗೆ ತಂದಿರಿಸಿದ್ದಾರೆ. ಆರೋಪಿ ಚಾಲಕ ಚರಣ್ ರಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಕಮಿಷನರ್ ಶಶಿಕುಮಾರ್, ಯಾವುದೇ ತುರ್ತು ಸೇವಾ ವಾಹನಗಳು ಸೈರನ್ ಹೊಡೆದು ಸಂಚರಿಸುತ್ತಿರುವ ವೇಳೆ ಸದರಿ ವಾಹನವನ್ನು ಹಿಂಬಾಲಿಸಿದಲ್ಲಿ ಅಥವಾ ಸಂಚಾರಕ್ಕೆ ಅಡ್ಡಿಪಡಿಸಿದಲ್ಲಿ ದಂಡ ಅಥವಾ ಆರು ತಿಂಗಳು ಶಿಕ್ಷೆ ವಿಧಿಸಬಹುದು. ಗಂಭೀರ ಅಪರಾಧ ಆಗಿದ್ದಲ್ಲಿ ಎರಡನ್ನೂ ವಿಧಿಸಲು ಅವಕಾಶ ಇರುತ್ತದೆ. ಹಾಗಾಗಿ ಸದ್ರಿ ಪ್ರಕರಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ. ಆತ ಡ್ರಿಂಕ್ಸ್ ಮಾಡಿ, ಈ ರೀತಿ ಅಪರಾಧ ಎಸಗಿದ್ದಾನೆಯೇ ಅನ್ನುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
Video:
The driver of a Maruti Ertiga car bearing registration No. KA19 MJ8924 was detained, his car was seized, and a fine was imposed. He had blocked the path of an ambulance on NH 66 stretch of Thokkottu to Pumpwell, by which a patient who was facing an emergency was being taken from Kanachur hospital to another hospital in the city. The incident had happened on the evening of Monday July 19 and the video clip of the same had gone viral on social media.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm