ಬ್ರೇಕಿಂಗ್ ನ್ಯೂಸ್
21-07-21 12:03 pm Headline Karnataka News Network ಕ್ರೈಂ
ಬೆಂಗಳೂರು, ಜುಲೈ 20: ಆರ್'ಟಿಐ ಕಾರ್ಯಕರ್ತ ವೆಂಕಟೇಶ್ ಕೊಲೆ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತಾವರೆಕೆರೆ ಟೌನ್ ನಿವಾಸಿ ಪ್ರದೀಪ್ ಕುಮಾರ್ ಅಲಿಯಾಸ್ ಪ್ರದೀ (33), ತಾವರಕೆರೆಯ ಮಂಜುನಾಥ ನಗರದ ನಿವಾಸಿ ಸತೀಶ್. ಟಿಸಿ (20), ತಾವರಕೆರೆಯ ಯಲಚಗುಪ್ಪೆ ನಿವಾಸಿ ತೇಜಸ್ ಕುಮಾರ್ ಎ (22) ಎಂದು ಗುರ್ತಿಸಲಾಗಿದೆ.
ಆರ್'ಟಿಐ ಕಾರ್ಯಕರ್ತ ವೆಂಕಟೇಶ್ ಅಲಿಯಾಸ್ ಮಹೀಮಯ್ಯ (43) ಎಂಬುವವರ ಮೇಲೆ ಜುಲೈ 15 ರಂದು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ದಾಳಿ ವೇಳೆ ವೆಂಕಟೇಶ್ ಅವರ ಬಲಗೈ ಹಾಗೂ ಕಾಲುಗಳನ್ನು ಕತ್ತರಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಕೊನೆಯುಸಿರೆಳೆದಿದ್ದರು.

ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಹತ್ಯೆಯು ಹಣಕಾಸು ವಿಚಾರವಾಗಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಫೈನಾನ್ಶಿಯರ್ ಆಗಿರುವ ಪ್ರದೀಪ್ ಕುಮಾರ್ ವೆಂಕಟೇಶ್ ಅವರಿಗೆ ರೂ.10 ಲಕ್ಷ ಸಾಲ ನೀಡಿದ್ದಾರೆ. ಈ ಹಣಕ್ಕೆ ಅಲ್ಪ ಪ್ರಮಾಣದ ಬಡ್ಡಿ ನೀಡಿದ್ದ ವೆಂಕಟೇಶ್ ಅವರು, ಸಾಲದ ಹಣವನ್ನು ಹಿಂತಿರುಗಿಸಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಪ್ರದೀಪ್ ಅವರು ಹಲವು ಬಾರಿ ಹಣವನ್ನು ಹಿಂತಿರುಗಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಇದಕ್ಕೆ ಒಪ್ಪದ ವೆಂಕಟೇಶ್ ಅವರು, ಪ್ರದೀಪ್ ವಿರುದ್ಧ ಪೊಲೀಸರಿಗೆ ದೂರು ನೀಡುವ ಬದರಿಕೆ ಹಾಕಿದ್ದಾರೆ. ಹೀಗಾಗಿ ವೆಂಕಟೇಶ್ ಅವರಿಗೆ ಪಾಠ ಕಲಿಸುವ ಸಲುವಾಗಿ ನಾಲ್ಕು ಮಂದಿಗೆ ಸುಪಾರಿ ನೀಡಿದ್ದಾರೆ. ವೆಂಕಟೇಶ್ ಅವರ ಮೇಲೆ ದಾಳಿ ನಡೆಸುವಂತೆ ತಿಳಿಸಿದ್ದಾರೆ.
ಪ್ರದೀಪ್ ಸುಪಾರಿ ನೀಡಿದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ವೆಂಕಟೇಶ್ ಅವರ ಮೇಲೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಪ್ರದೀಪ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರೂ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಿದ್ದಾರೆಂದು ತಿಳಿದುಬಂದಿದೆ.
Read: ಆರ್ಟಿಐ ಕಾರ್ಯಕರ್ತನ ಕೈ ಕಾಲು ಕಡಿದುಹಾಕಿದ ದುಷ್ಕರ್ಮಿಗಳು ! ನಡುಬೀದಿಯಲ್ಲಿ ಬೆಚ್ಚಿ ಬೀಳಿಸಿದ ಕೃತ್ಯ
Three persons have been arrested by the police in connection with the murder of an RTI activist at Tavarekere in Ramanagara district.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm