ಬ್ರೇಕಿಂಗ್ ನ್ಯೂಸ್
21-07-21 05:27 pm Mangalore Correspondent ಕ್ರೈಂ
ಮಂಗಳೂರು, ಜುಲೈ 21: ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಕಡಿಯಲು ರೆಡಿ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿನ ಕರುಗಳನ್ನು ಪತ್ತೆ ಮಾಡಲಾಗಿದೆ.
ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕೊಣಾಜೆಯ ಪಜೀರಿನಲ್ಲಿರುವ ಗೋವನಿತಾಶ್ರಮ ಗೋಶಾಲೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಕುದ್ರೋಳಿ ಕಸಾಯಿಖಾನೆಯಲ್ಲಿ ಕರು ಸೇರಿದಂತೆ ಅಪ್ರಾಪ್ತ ವಯಸ್ಸಿನ ಗೋವುಗಳನ್ನು ಕಡಿಯುತ್ತಿರುವ ಬಗ್ಗೆ ಮಾಹಿತಿ ಪಡೆದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. 2020ರಲ್ಲಿ ಜಾರಿಗೆ ತಂದಿರುವ ನೂತನ ಕಾಯ್ದೆ ಪ್ರಕಾರ, ಅಪ್ರಾಪ್ತ ವಯಸ್ಸಿನ ಗೋವುಗಳನ್ನು ವಧೆ ಮಾಡುವುದು ಅಪರಾಧವಾಗಿದ್ದರಿಂದ ಕುದ್ರೋಳಿ ಕಸಾಯಿಖಾನೆಯ ಗುತ್ತಿಗೆ ಪಡೆದವರ ಲೈಸನ್ಸ್ ರದ್ದು ಮಾಡಲಾಗಿತ್ತು. ಅಲ್ಲದೆ, ವಧಾ ಗೃಹದ ಆವರಣದಲ್ಲಿ ಸಿಸಿಟಿವಿಯನ್ನೂ ಅಳವಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕುದ್ರೋಳಿ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿಯಲಾಗಿಲ್ಲ ಎನ್ನುವ ಮಾಹಿತಿಯನ್ನು ಮೇಯರ್ ನೀಡಿದ್ದಾರೆ. ಅಲ್ಲದೆ, ಇಂದು ದಾಳಿ ನಡೆದಿರುವ ಜಾಗ ಅಲ್ಲಿಯೇ ಪಕ್ಕದ ಖಾಸಗಿ ಜಾಗ. ಆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ. ಕಸಾಯಿಖಾನೆಯ ಪಕ್ಕದಲ್ಲೇ ಬೇರೊಂದು ಕಟ್ಟಡದಲ್ಲಿ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇಂದು ಬಕ್ರೀದ್ ಹಿನ್ನೆಲೆಯಲ್ಲಿ ಕಸಾಯಿಖಾನೆ ನಡೆಸುತ್ತಿದ್ದವರೇ ಕರುಗಳನ್ನು ಕಡಿಯಲು ಸಿದ್ಧತೆ ನಡೆಸಿದ್ದರು ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
MCC and Police raid on Kudroli Slaughter house in Mangalore on bakrid. Two young cows rescued and one person has been arrested.
28-03-25 10:47 pm
Bangalore Correspondent
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
28-03-25 04:15 pm
HK News Desk
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
28-03-25 11:16 pm
Udupi Correspondent
Mangalore University, Rajendra Kumar, Rohan M...
28-03-25 07:38 pm
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
28-03-25 09:25 pm
Mangalore Correspondent
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm