ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm