ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm