ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm