ಬ್ರೇಕಿಂಗ್ ನ್ಯೂಸ್
28-07-21 08:26 pm Mangaluru correspondent ಕ್ರೈಂ
ಮಂಗಳೂರು, ಜುಲೈ 28: ಆಟೋ ರಿಕ್ಷಾ ಚಾಲಕನಿಂದ ಕಿರುಕುಳ ಆಗ್ತಿದೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ತಾಯಿ ಜೊತೆಗೆ ಪೊಲೀಸರಿಗೆ ದೂರು ನೀಡಲು ಬಂದಿದ್ದಳು. ದೂರು ಪಡೆದ ಪೊಲೀಸ್ ಪೇದೆ ಆಟೋ ಚಾಲಕನನ್ನು ಗದರಿಸಿ, ಹುಡುಗಿಯ ನಂಬರ್ ಪಡೆದಿದ್ದ. ಆನಂತರ ಕಿರುಕುಳಕ್ಕೆ ಒಳಗಾದ ಹುಡುಗಿಯ ಜೊತೆ ತಾನೇ ಚಾಟ್ ಮಾಡಲು ಆರಂಭಿಸಿದ್ದ. ನ್ಯಾಯ ಕೇಳಿಕೊಂಡು ಬಂದ ಹುಡುಗಿಗೆ ತಾನೇ ಕಿರುಕುಳ ಕೊಡಲು ಆರಂಭಿಸಿದ್ದ.
ಸಿನಿಮಾಗಳಲ್ಲಿ ಸ್ಲಂ ಹುಡುಗಿಯರನ್ನು ಯಾಮಾರಿಸಿದ ಆಟೋ ಚಾಲಕನನ್ನು ದೂರಕ್ಕೆ ತಳ್ಳಿ ಪೊಲೀಸರೇ ಕಾಮತೃಷೆ ತೀರಿಸಿಕೊಳ್ಳುವ ಕತೆಯಿರುತ್ತೆ. ಆದರೆ, ಈಗ ನಾವು ಹೇಳ್ತಿರೋದು ಯಾವ ಸಿನಿಮಾ ಕತೆಯೂ ಅಲ್ಲ. ಬುದ್ಧಿವಂತರು ಎಂದು ಕರೆಸಿಕೊಳ್ಳುವ ಮಂಗಳೂರು ನಗರದಲ್ಲೇ ಆಗಿರುವ ರಿಯಲ್ ಕತೆ.


ಅಪ್ರಾಪ್ತ ಹುಡುಗಿ ಕಳೆದ ಜನವರಿಯಲ್ಲಿ ಆಟೋ ಚಾಲಕನ ಕಿರುಕುಳ ತಾಳಲಾರದೆ ದೂರು ಹಿಡಿದು ಬಂದಿದ್ದಳು. ಈ ಬಗ್ಗೆ ಆಟೋ ಚಾಲಕನನ್ನು ಗದರಿಸುತ್ತೇನೆಂದು ಹುಡುಗಿಯ ನಂಬರ್ ಪಡೆದಿದ್ದ ಪೊಲೀಸಪ್ಪ ತಾನು ಹೇಳಿದ ಕೆಲಸವನ್ನು ಮಾಡಿದ್ದಾನೆ. ಆದರೆ, ಸದಾ ಕಳ್ಳರು, ದರೋಡೆಕೋರರು, ಪಾಪಿಗಳ ಜೊತೆಗೆ ಇದ್ದುಕೊಂಡಿದ್ದ ಕಾರಣಕ್ಕೋ ಏನೋ, ಆ ಪೊಲೀಸಪ್ಪನಿಗೂ ಅದೇ ವರ್ತನೆ ಬಂದಿದೆ. ಪಾಪದ ಹುಡುಗಿಗೆ ವಿಕೃತ ಕಿರುಕುಳ ನೀಡಲು ಮುಂದಾಗಿದ್ದ. ಸೆಕ್ಸ್ ವಿಚಾರದಲ್ಲಿ ಚಾಟಿಂಗ್ ಮಾಡುತ್ತಾ ಕಿರುಕುಳ ಕೊಟ್ಟಿದ್ದಾನೆ. ತಾನು ಪೊಲೀಸ್, ತನ್ನದೇನೂ ಹೊರಗೆ ಬರುವುದಿಲ್ಲ. ಪಾಪದ ಹುಡುಗಿ ಏನು ಮಾಡುತ್ತಾಳೆಂಬ ದರ್ಪದಲ್ಲಿ ಇಂಥ ಕೃತ್ಯಕ್ಕೆ ಇಳಿದಿದ್ದನೋ ಏನೋ..
ಹುಡುಗಿಯ ಮನೆಯವರು ಪೊಲೀಸ್ ಪೇದೆಯ ಕಿರುಕುಳ ತಾಳಲಾರದೆ, ವಿಧಿ ಕಾಣದೆ ಯಾರೋ ಹೇಳಿದರೆಂದು ಚೈಲ್ಡ್ ಲೈನ್ ಸಂಸ್ಥೆಯವರಲ್ಲಿ ವಿಷಯ ಹೇಳಿಕೊಂಡಿದ್ದಾರೆ. ಮೊಬೈಲಿನಲ್ಲಿ ವಿಕೃತವಾಗಿದ್ದ ಚಾಟಿಂಗ್ ರೆಕಾರ್ಡನ್ನು ನೋಡಿದ ಅಲ್ಲಿನ ಸಿಬಂದಿ ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ಕಂಕನಾಡಿ ನಗರ ಠಾಣೆಯ ಪೇದೆ ಬೆಂಗ್ರೆ ನಿವಾಸಿ ವಿನೋದ್ ನನ್ನು ಬಂಧಿಸಿದ್ದಾರೆ. ಅಲ್ಲದೆ, ಅಪ್ರಾಪ್ತ ಹುಡುಗಿಗೆ ಕಿರುಕುಳ ನೀಡಿದ್ದ ಕಾರಣಕ್ಕೆ ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
ಪೊಲೀಸ್ ಕರ್ತವ್ಯದಲ್ಲಿದ್ದುಕೊಂಡು ಈ ರೀತಿಯ ಕೃತ್ಯ ಮಾಡಬಾರದು ಎಂದು ಖುದ್ದು ಪೊಲೀಸ್ ಕಮಿಷನರ್ ಸಾಹೇಬ್ರೇ ವಿಷಯ ಗೊತ್ತಾಗುತ್ತಲೇ ಖಡಕ್ಕಾಗಿ ಕ್ರಮ ಜರುಗಿಸಲು ಸೂಚಿಸಿದ್ದಾರೆ.
POCSO case is filed against a police constable of Kankandy Town Police. The police constable has been arrested. The arrested has been identified as Vinod.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm