ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.

ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm