ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.

ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm