ಬ್ರೇಕಿಂಗ್ ನ್ಯೂಸ್
04-09-20 07:20 pm Headline Karnataka News Network ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಮತ್ತೊಬ್ಬ ಡ್ರಗ್ ಕಿಂಗ್ ಪಿನ್ ನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.
ದೆಹಲಿ ಮೂಲದ ವೀರೇನ್ ಖನ್ನಾ ಬಂಧಿತ. ಈತನ ಬಗ್ಗೆ ಖಚಿತ ಮಾಹಿತಿ ಪಡೆದು ದೆಹಲಿಗೆ ತೆರಳಿದ್ದ ಇಬ್ಬರು ಸಿಸಿಬಿ ಇನ್ಸ್ ಪೆಕ್ಟರ್ ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್, ಆರೋಪಿ ಖನ್ನಾನನ್ನು ಬಂಧಿಸಿದ್ದಾರೆ.
ವೀರೇನ್ ಖನ್ನಾ ಬೆಂಗಳೂರು ಸೇರಿದಂತೆ ವಿವಿಧ ಕಡೆ ದೊಡ್ಡ ಪ್ರಮಾಣದ ಪಾರ್ಟಿಗಳನ್ನು ನಡೆಸುತ್ತಿದ್ದ. ಪ್ರತೀಕ್ ಶೆಟ್ಟಿ, ರಾಜ್ ಜೊತೆಗೆ ಸೇರಿ ಪಾರ್ಟಿಗಳನ್ನು ನಡೆಸುತ್ತಿದ್ದ ಎನ್ನುವ ಮಾಹಿತಿ ಲಭಿಸಿದೆ. ಈ ಪಾರ್ಟಿಯಲ್ಲಿ ಚಿತ್ರರಂಗದ ನಟ, ನಟಿಯರು ಪಾಲ್ಗೊಳ್ಳುವಂತೆ ವೀರೇನ್ ಖನ್ನಾ ಆಯೋಜನೆ ಮಾಡುತ್ತಿದ್ದ. ಇತ್ತ ಬೆಂಗಳೂರಿನಲ್ಲಿ ಡ್ರಗ್ಸ್ ನಂಟು ಬಹಿರಂಗ ಆಗುತ್ತಲೇ ದೆಹಲಿಗೆ ಎಸ್ಕೇಪ್ ಆಗಿದ್ದ ವೀರೇನ್ ಖನ್ನಾ , ಅಲ್ಲಿ ತಲೆಮರೆಸಿಕೊಂಡಿದ್ದ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೆನ್ನತ್ತಿದ ಪೊಲೀಸ್ ತಂಡ ಇದೀಗ ಮಹತ್ವದ ಕಾರ್ಯಾಚರಣೆ ಮೂಲಕ ಖನ್ನಾನನ್ನು ಬಲೆಗೆ ಕೆಡವಿದ್ದಾರೆ.
ವೀರೇನ್ ಖನ್ನಾ ಸ್ಯಾಂಡಲ್ ವುಡ್ ನಟ- ನಟಿಯರಿಗೆ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಆರೋಪ ಹೊಂದಿದ್ದಾನೆ. ಬೆಂಗಳೂರಿನಲ್ಲೇ ಕಾಲೇಜು ಶಿಕ್ಷಣ ಪಡೆದಿದ್ದ ವೀರೇನ್ ಖನ್ನಾ ವಿದೇಶಿ ಪೆಡ್ಲರ್ ಗಳ ನಂಟು ಗಳಿಸಿಕೊಂಡಿದ್ದ. ವಿದೇಶದಿಂದ ಡ್ರಗ್ ತರಿಸಿಕೊಂಡು ಬೇರೆ ಬೇರೆ ಕಡೆಗೆ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm