ಬ್ರೇಕಿಂಗ್ ನ್ಯೂಸ್
31-07-21 10:19 pm Mangaluru Correspondent ಕ್ರೈಂ
ಬೆಂಗಳೂರು, ಜುಲೈ 31: ಸಿಎಂ ಬಸವರಾಜ್ ಬೊಮ್ಮಾಯಿ ಸರಕಾರದಲ್ಲಿ ಸಚಿವರಾಗುವ ಮಂದಿ ಕಳಂಕ ರಹಿತರು ಆಗಿರಬೇಕೆಂದು ಆರೆಸ್ಸೆಸ್ ಹೊಸ ಡಿಮ್ಯಾಂಡ್ ಇಟ್ಟಿದೆ. ಅದರಂತೆ, ಸಿಡಿ ಭಯದಿಂದ ಕೋರ್ಟಿಗೆ ಹೋಗಿರುವ ಶಾಸಕರು ಮತ್ತು ಕಳೆದ ಬಾರಿ ಸಚಿವರಾಗಿದ್ದ ಕೆಲವು ಮಂದಿಗೆ ಸಚಿವ ಸ್ಥಾನ ನೀಡಬಾರದೆಂದು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದ್ದಾಗಿ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ಈ ರೀತಿಯ ವದಂತಿ ಹರಡಿದ್ದರೂ, ಕಳಂಕಿತ ಸಚಿವರನ್ನು ಬಿಟ್ಟು ಸಚಿವ ಸಂಪುಟ ಮಾಡುವುದು ಬಿಜೆಪಿಗೆ ಅಷ್ಟೇ ಕಷ್ಟವೂ ಆಗಲಿದೆ.
ಕಳೆದ ಬಾರಿ ಪ್ರಭಾವಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರ ಸಿಡಿ ಹೊರಬಂದು ರಾಜಕೀಯದಲ್ಲಿ ಭಾರೀ ರಾಡಿ ಎಬ್ಬಿಸಿತ್ತು. ಅದರ ಬೆನ್ನಲ್ಲೇ ಹಲವು ಸಚಿವರು ಮತ್ತು ಕೆಲವು ಶಾಸಕರು ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗದಂತೆ ಕೋರ್ಟ್ ಮೂಲಕ ತಡೆಯಾಜ್ಞೆ ತಂದಿದ್ದರು. ಶಾಸಕರು, ಸಚಿವರು ಈ ರೀತಿ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಬಿಜೆಪಿಗೆ ಇರಿಸು ಮುರಿಸು ಮಾಡಿತ್ತು. ರಾಷ್ಟ್ರ ಮಟ್ಟದಲ್ಲಿಯೂ ಬಿಜೆಪಿಗೆ ಮುಜುಗರ ಉಂಟು ಮಾಡಿತ್ತು.
ಇದೀಗ ಅಂಥ ಕಳಂಕಿತರು ಯಾರಿದ್ದಾರೆ, ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬಾರದೆಂದು ಆರೆಸ್ಸೆಸ್ ನಾಯಕರು ಕೂಡ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಕಳೆದ ಬಾರಿ ಬಿಜೆಪಿ ಸೇರಿದ್ದ ಬಹುತೇಕ ವಲಸಿಗ ಶಾಸಕರು ತಮ್ಮ ವಿರುದ್ಧ ಮಾಧ್ಯಮದಲ್ಲಿ ಸುದ್ದಿ ಪ್ರಕಟಿಸಬಾರದೆಂದು ಸ್ಟೇ ತಂದಿದ್ದರು. ಅವರನ್ನು ಹೊರತುಪಡಿಸಿ ಬಿಜೆಪಿ ಸರಕಾರದಲ್ಲಿ ಸಂಪುಟ ರಚನೆ ಮಾಡುವುದು ಕಷ್ಟ ಎನ್ನಲಾಗುತ್ತಿದ್ದರೂ, ಹೈಕಮಾಂಡ್ ಮತ್ತು ಆರೆಸ್ಸೆಸ್ ನಾಯಕರ ಸೂಚನೆಯಿಂದಾಗಿ ಸಿಎಂ ಬೊಮ್ಮಾಯಿ ಸಂಕಟದಲ್ಲಿ ಬಿದ್ದಂತಾಗಿದೆ.

ಈ ನಡುವೆ, ಹೊನ್ನಾಳಿ ಶಾಸಕ ಮತ್ತು ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಎಂ.ಪಿ. ರೇಣುಕಾಚಾರ್ಯ ಕೂಡ ಕೋರ್ಟ್ ಸ್ಟೇ ತಂದಿದ್ದು, ತಮ್ಮ ವಿರುದ್ಧ ನಿಂದನಾತ್ಮಕ ಸುದ್ದಿಗಳನ್ನು ಬಿತ್ತರಿಸದಂತೆ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ತಂದಿದ್ದಾರೆ. ಆರೆಸ್ಸೆಸ್ ನಾಯಕರ ಈ ರೀತಿಯ ನಿರ್ಧಾರ ರೇಣುಕಾಚಾರ್ಯ ಕೂಡ ಸಚಿವ ಸ್ಥಾನಕ್ಕೇರದಂತೆ ಬ್ರೇಕ್ ನೀಡಿದಂತಾಗಿದೆ.
Karnataka cabinet expansion CD Fallout 6 Karnataka Ministers Move Seeking Restraint on Defamatory Content
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm