ಬ್ರೇಕಿಂಗ್ ನ್ಯೂಸ್
31-07-21 10:19 pm Mangaluru Correspondent ಕ್ರೈಂ
ಬೆಂಗಳೂರು, ಜುಲೈ 31: ಸಿಎಂ ಬಸವರಾಜ್ ಬೊಮ್ಮಾಯಿ ಸರಕಾರದಲ್ಲಿ ಸಚಿವರಾಗುವ ಮಂದಿ ಕಳಂಕ ರಹಿತರು ಆಗಿರಬೇಕೆಂದು ಆರೆಸ್ಸೆಸ್ ಹೊಸ ಡಿಮ್ಯಾಂಡ್ ಇಟ್ಟಿದೆ. ಅದರಂತೆ, ಸಿಡಿ ಭಯದಿಂದ ಕೋರ್ಟಿಗೆ ಹೋಗಿರುವ ಶಾಸಕರು ಮತ್ತು ಕಳೆದ ಬಾರಿ ಸಚಿವರಾಗಿದ್ದ ಕೆಲವು ಮಂದಿಗೆ ಸಚಿವ ಸ್ಥಾನ ನೀಡಬಾರದೆಂದು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದ್ದಾಗಿ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ಈ ರೀತಿಯ ವದಂತಿ ಹರಡಿದ್ದರೂ, ಕಳಂಕಿತ ಸಚಿವರನ್ನು ಬಿಟ್ಟು ಸಚಿವ ಸಂಪುಟ ಮಾಡುವುದು ಬಿಜೆಪಿಗೆ ಅಷ್ಟೇ ಕಷ್ಟವೂ ಆಗಲಿದೆ.
ಕಳೆದ ಬಾರಿ ಪ್ರಭಾವಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರ ಸಿಡಿ ಹೊರಬಂದು ರಾಜಕೀಯದಲ್ಲಿ ಭಾರೀ ರಾಡಿ ಎಬ್ಬಿಸಿತ್ತು. ಅದರ ಬೆನ್ನಲ್ಲೇ ಹಲವು ಸಚಿವರು ಮತ್ತು ಕೆಲವು ಶಾಸಕರು ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗದಂತೆ ಕೋರ್ಟ್ ಮೂಲಕ ತಡೆಯಾಜ್ಞೆ ತಂದಿದ್ದರು. ಶಾಸಕರು, ಸಚಿವರು ಈ ರೀತಿ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಬಿಜೆಪಿಗೆ ಇರಿಸು ಮುರಿಸು ಮಾಡಿತ್ತು. ರಾಷ್ಟ್ರ ಮಟ್ಟದಲ್ಲಿಯೂ ಬಿಜೆಪಿಗೆ ಮುಜುಗರ ಉಂಟು ಮಾಡಿತ್ತು.
ಇದೀಗ ಅಂಥ ಕಳಂಕಿತರು ಯಾರಿದ್ದಾರೆ, ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬಾರದೆಂದು ಆರೆಸ್ಸೆಸ್ ನಾಯಕರು ಕೂಡ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಕಳೆದ ಬಾರಿ ಬಿಜೆಪಿ ಸೇರಿದ್ದ ಬಹುತೇಕ ವಲಸಿಗ ಶಾಸಕರು ತಮ್ಮ ವಿರುದ್ಧ ಮಾಧ್ಯಮದಲ್ಲಿ ಸುದ್ದಿ ಪ್ರಕಟಿಸಬಾರದೆಂದು ಸ್ಟೇ ತಂದಿದ್ದರು. ಅವರನ್ನು ಹೊರತುಪಡಿಸಿ ಬಿಜೆಪಿ ಸರಕಾರದಲ್ಲಿ ಸಂಪುಟ ರಚನೆ ಮಾಡುವುದು ಕಷ್ಟ ಎನ್ನಲಾಗುತ್ತಿದ್ದರೂ, ಹೈಕಮಾಂಡ್ ಮತ್ತು ಆರೆಸ್ಸೆಸ್ ನಾಯಕರ ಸೂಚನೆಯಿಂದಾಗಿ ಸಿಎಂ ಬೊಮ್ಮಾಯಿ ಸಂಕಟದಲ್ಲಿ ಬಿದ್ದಂತಾಗಿದೆ.

ಈ ನಡುವೆ, ಹೊನ್ನಾಳಿ ಶಾಸಕ ಮತ್ತು ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಎಂ.ಪಿ. ರೇಣುಕಾಚಾರ್ಯ ಕೂಡ ಕೋರ್ಟ್ ಸ್ಟೇ ತಂದಿದ್ದು, ತಮ್ಮ ವಿರುದ್ಧ ನಿಂದನಾತ್ಮಕ ಸುದ್ದಿಗಳನ್ನು ಬಿತ್ತರಿಸದಂತೆ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ತಂದಿದ್ದಾರೆ. ಆರೆಸ್ಸೆಸ್ ನಾಯಕರ ಈ ರೀತಿಯ ನಿರ್ಧಾರ ರೇಣುಕಾಚಾರ್ಯ ಕೂಡ ಸಚಿವ ಸ್ಥಾನಕ್ಕೇರದಂತೆ ಬ್ರೇಕ್ ನೀಡಿದಂತಾಗಿದೆ.
Karnataka cabinet expansion CD Fallout 6 Karnataka Ministers Move Seeking Restraint on Defamatory Content
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm