ಬ್ರೇಕಿಂಗ್ ನ್ಯೂಸ್
03-08-21 04:00 pm Headline Karnataka News Network ಕ್ರೈಂ
ತುಮಕೂರು, ಆಗಸ್ಟ್ 3 : ಆರು ವರ್ಷಗಳ ಹಿಂದೆ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಮದರಸಾ ಶಿಕ್ಷಕನಿಗೆ 11 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 30 ಸಾವಿರ ರೂ. ದಂಡ ವಿಧಿಸಿ ತುಮಕೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಉತ್ತರ ಪ್ರದೇಶ ಮೂಲದ ಮಫ್ತಿ ಮುಷರಫ್ ಶಿಕ್ಷೆಗೆ ಗುರಿಯಾಗಿರುವ ಮದರಸಾ ಶಿಕ್ಷಕ. ತುಮಕೂರು ತಾಲೂಕಿನ ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿದ್ದ ಈತ, 2015ರ ಏಪ್ರಿಲ್ 17ರಂದು 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ. ಪ್ರಕರಣ ದಾಖಲಾಗಿ ಆರೋಪ ಸಾಬೀತಾದ ಕಾರಣ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ಕೃಷ್ಣಯ್ಯ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಅಲ್ಲದೆ ಸಂತ್ರಸ್ತ ಬಾಲಕನಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮಫ್ತಿ ಮುಷರಕ್, 2015ರ ಏಪ್ರಿಲ್ 17ರಂದು ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಲು ಕನ್ನಡ ಭಾಷೆ ಅರ್ಥವಾಗದ ಕಾರಣ ಸಹಾಯಕ್ಕೆಂದು ಬಾಲಕನನ್ನು ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದ. ಬಳಿಕ ತನ್ನ ಬೈಕ್ನ ಪೆಟ್ರೋಲ್ ಖಾಲಿಯಾಗಿದೆ, ಲಾಡ್ಜ್ನಲ್ಲಿ ಉಳಿಯೋಣ ಎಂದು ಬಾಲಕನನ್ನು ಬಲವಂತದಿಂದ ರೈಲ್ವೇ ನಿಲ್ದಾಣ ಸಮೀಪದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ.
ಅಲ್ಲಿ ಬಾಲಕನ ಮೇಲೆ ದೌರ್ಜನ್ಯ ಎಸಗಿದ್ದ. ಮರುದಿನ ಬೈಕ್ನಲ್ಲಿ ಬಾಲಕನನ್ನು ಮರಳಿ ಹಾಸ್ಟೆಲ್ಗೆ ಬಿಟ್ಟು, ಯಾರಿಗೂ ವಿಚಾರ ಹೇಳದಂತೆ ಆತನಿಗೆ ಬೆದರಿಕೆ ಹಾಕಿ ಅದೇ ದಿನ ಮಧ್ಯಾಹ್ನ ಲಾಡ್ಜ್ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ. ಆದರೆ ಲಾಡ್ಜ್ ಪ್ರವೇಶ ಸಂದರ್ಭದಲ್ಲಿ ರಿಜಿಸ್ಟ್ರಾರ್ ಬುಕ್ ನಲ್ಲಿ ಆರೋಪಿ ತನ್ನ ಹೆಸರು ಮತ್ತು ಹುಡುಗನ ಹೆಸರನ್ನು ಉಲ್ಲೇಖಿಸಿದ್ದ. ಖಾಲಿ ಮಾಡುವಾಗ ಆರೋಪಿಯ ಹೆಸರು ಮಾತ್ರ ಬರೆದಿರುವುದು ದಾಖಲಾಗಿತ್ತು.

ಘಟನೆ ನಡೆದ ನಂತರ ಬಾಲಕನನ್ನು ಆತನ ತಾಯಿ ಭೇಟಿಯಾದ ಸಮಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ವಿಷಯ ಬೆಳಕಿಗೆ ಬಂದಿತ್ತು. ತಾಯಿಯ ಮುಂದೆ ಬಾಲಕ ತನ್ನ ನೋವನ್ನು ಹೇಳಿಕೊಂಡಿದ್ದನು. ಅಲ್ಲದೆ, ಹಾಸ್ಟೆಲ್ನಿಂದ ತನ್ನನ್ನು ಕರೆದು ಹೋಗುವಂತೆ ಕೇಳಿಕೊಂಡಿದ್ದ. ಈ ಬಗ್ಗೆ ಬಾಲಕನ ತಾಯಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿದ ಪೊಲೀಸರು, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377(ಅಸಹಜ ಲೈಂಗಿಕತೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ನ್ಯಾಯಾಲಯವು ವಿಚಾರಣೆ ವೇಳೆ 11 ಮಂದಿ ಪ್ರತ್ಯಕ್ಷ ದರ್ಶಿಗಳ ಸಾಕ್ಷಿಯನ್ನು ಪಡೆದಿದ್ದು, ದೌರ್ಜನ್ಯಕ್ಕೊಳಗಾದ ಬಾಲಕ ಮತ್ತು ತಾಯಿಯ ಹೇಳಿಕೆಗಳು ನಿರ್ಣಾಯಕವೆಂದು ಪರಿಗಣಿಸಿ, ಅಪರಾಧಿ ಮದರಸಾ ಶಿಕ್ಷಕನಿಗೆ ಶಿಕ್ಷೆ ನೀಡಿದೆ. ಪ್ರಕರಣದಲ್ಲಿ ಸಂತ್ರಸ್ತ ಬಾಲಕನ ಪರವಾಗಿ ಸರ್ಕಾರಿ ಅಭಿಯೋಜಕಿ ಗಾಯತ್ರಿ ವಾದ ಮಂಡಿಸಿದ್ದರು.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm