ಬ್ರೇಕಿಂಗ್ ನ್ಯೂಸ್
05-09-20 12:17 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 5: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಜನಪ್ರಿಯ ಚಿತ್ರನಟಿ ರಾಗಿಣಿ ದ್ವಿವೇದಿ ದೊಡ್ಡ ಸಂಕಷ್ಟದಲ್ಲಿ ಬಿದ್ದಿದ್ದಾರೆ. ಪ್ರಕರಣದಲ್ಲಿ ಕಠಿಣ ಸೆಕ್ಷನ್ ಗಳನ್ನು ದಾಖಲಿಸಿರುವ ಸಿಸಿಬಿ ಪೊಲೀಸರಿಂದಾಗಿ ರಾಗಿಣಿ ಅದರಿಂದ ಹೊರಬರುವುದು ಕಷ್ಟ ಎಂದೇ ಹೇಳಲಾಗುತ್ತಿದೆ.
ರಾಗಿಣಿ ವಿರುದ್ಧ 1985ರ ಎನ್ಡಿಪಿಎಸ್ ಕಾಯ್ದೆಯ ಸೆಕ್ಷನ್ 21(ಬಿ), 21(ಸಿ) ಮತ್ತು 22(ಸಿ) ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಇವು ಮಾದಕ ವಸ್ತು ಮತ್ತು ಮಾನಸಿಕ ಪ್ರಭಾವ ಬೀರುವ ವಸ್ತುಗಳನ್ನ ಹೊಂದಿರುವುದು, ಅವುಗಳ ತಯಾರಿಕೆ, ಮಾರಾಟ, ಖರೀದಿ, ಸಾಗಣೆ ಮಾಡಿದ ಅಪರಾಧಗಳಾಗಿದ್ದು ಆರೋಪ ಸಾಬೀತಾದರೆ ಕಠಿಣ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ. ಒಂದು ವೇಳೆ ಸ್ಯಾಂಡಲ್ವುಡ್ ನಟಿ ರಾಗಿಣಿ ಮೇಲಿನ ಆರೋಪ ಸಾಬೀತಾದಲ್ಲಿ ನ್ಯಾಯಾಲಯವು ಆಕೆಗೆ 20 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 2 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು. ಹೀಗಾದರೆ ಚಿತ್ರನಟಿ ಒಬ್ಬರು ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಶಿಕ್ಷೆಗೆ ಗುರಿಯಾದ ಮೊದಲ ಭಾರತೀಯ ನಟಿ ಎಂಬ ಅಪಖ್ಯಾತಿಯೂ ಜೊತೆ ಸೇರಲಿದೆ.

ಇನ್ನು ಡ್ರಗ್ಸ್ ಪೆಡ್ಲರ್ಗಳಾದ ರಾಹುಲ್ ಮತ್ತು ರವಿಶಂಕರ್ ಜೊತೆಗೆ ಹೊಂದಿದ್ದ ನಂಟೇ ಇದೀಗ ನಟಿ ರಾಗಿಣಿಗೆ ದುಬಾರಿಯಾಗಿ ಪರಿಣಮಿಸಿದೆ. ಆರ್ಟಿಒ ಅಧಿಕಾರಿ ಮತ್ತು ರಾಗಿಣಿ ಆಪ್ತನಾಗಿದ್ದ ರವಿಶಂಕರ್ ಬಂಧನದ ಬಳಿಕ ಸಿಸಿಬಿಗೆ ಚಿತ್ರನಟ ನಟಿಯರು ಡ್ರಗ್ ದಂಧೆಯಲ್ಲಿರುವ ಖಚಿತ ಸಾಕ್ಷ್ಯಗಳು ಲಭಿಸಿದ್ದವು. ರವಿಶಂಕರ್ ಜೊತೆ ಸೇರಿ ರಾಗಿಣಿ ಡ್ರಗ್ಸ್ ಜಾಲದಲ್ಲೂ ಭಾಗಿಯಾಗಿದ್ದು, ಜೊತೆಗೆ ಹಣಕಾಸಿವ ವ್ಯವಹಾರವನ್ನೂ ನಡೆಸಿದ್ದಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳು ಸಿಕ್ಕಿದೆ ಎನ್ನಲಾಗುತ್ತಿದ್ದು ರಾಗಿಣಿ ಪಾಲಿಗೆ ಕುಣಿಗೆ ಬಿಗಿಯಾಗುವ ಸಾಧ್ಯತೆ ಕಂಡುಬಂದಿದೆ. ರಾಗಿಣಿಯನ್ನು ಎರಡು ದಿನಗಳ ಹಿಂದೆಯೇ ವಿಚಾರಣೆ ನಡೆಸಬೇಕಿತ್ತು. ಅನಾರೋಗ್ಯದ ನಾಟಕ ಆಡಿದ್ದರಿಂದ ನಿನ್ನೆ ಮನೆಗೇ ತೆರಳಿ, ಆಕೆಯನ್ನು ವಿಚಾರಣೆಗೆ ಕರೆತಂದಿದ್ದರು. ನಂತರ ವಿಡಿಯೋ ಕಾನ್ಫೆರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಲ್ಲದೆ, 3 ದಿನ ಪೊಲೀಸ್ ಕಸ್ಟಡಿಗೆ ಪಡೆಯಲು ಸಿಸಿಬಿ ಯಶಸ್ವಿಯಾಗಿದೆ.

ನಿನ್ನೆ ಸಂಜೆ ಬಂಧನ ಖಚಿತ ಪಡಿಸಿದ ಪೊಲೀಸರು, ರಾತ್ರಿ ಕಳೆಯಲು ರಾಗಿಣಿ ಅವರನ್ನ ಕಿದ್ವಾಯಿ ಆಸ್ಪತ್ರೆ ಸಮೀಪದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸಾಮಾನ್ಯ ಆರೋಪಿಗಳ ರೀತಿಯಲ್ಲಿ ರಾಗಿಣಿಗೆ ಊಟ ಹಾಗೂ ಸೌಲಭ್ಯ ನೀಡಲಾಗಿತ್ತು. ಇಂದು ಸಿಸಿಬಿ ಕಚೇರಿಯಲ್ಲಿ ಡಿಸಿಪಿ ರವಿಕುಮಾರ್ ಮತ್ತು ಇನ್ಸ್ಪೆಕ್ಟರ್ ಅಂಜುಮಾಲ ನೇತೃತ್ವದಲ್ಲಿ ರಾಗಿಣಿ ವಿಚಾರಣೆ ಮುಂದುವರಿಯಲಿದೆ.
ಬೆಂಗಳೂರಿನಲ್ಲಿರುವ ಡ್ರಗ್ಸ್ ಜಾಲವನ್ನು ಅಮೂಲಾಗ್ರವಾಗಿ ಬಯಲಿಗೆಳೆಯಲು ಸಿಸಿಬಿಯಿಂದ ಆರು ತಂಡಗಳನ್ನು ನಿಯೋಜನೆ ಮಾಡಲಾಗಿದ್ದು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಹಲವು ಡ್ರಗ್ಸ್ ಪೆಡ್ಲರ್ಗಳನ್ನ ಬಂಧಿಸಲಾಗಿದೆ. ರಾಗಿಣಿ ದ್ವಿವೇದಿ, ರಾಹುಲ್, ರವಿಶಂಕರ್ ಮತ್ತು ವೀರೇನ್ ಖನ್ನಾ ಅವರನ್ನ ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗತ್ತಿದೆ. ವೀರೇನ್ ಖನ್ನಾ ದೆಹಲಿಯವನಾಗಿದ್ದು ಫ್ಯಾಷನ್ ಲೋಕದಲ್ಲಿ ಹೆಸರು ಮಾಡಿದಾತ. ಬೆಂಗಳೂರಿನಲ್ಲಿ ಹೈಫೈ ಪಾರ್ಟಿಗಳ ಆಯೋಜಕನೂ ಆಗಿದ್ದ. ಅವರ ಸಂಪರ್ಕದಲ್ಲಿರುವವರನ್ನ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am