ಬ್ರೇಕಿಂಗ್ ನ್ಯೂಸ್
07-08-21 05:48 pm Headline Karnataka News Network ಕ್ರೈಂ
ಚೆನ್ನೈ, ಆಗಸ್ಟ್ 7: ಸೈಬರ್ ಕ್ರೈಮ್ ಪೊಲೀಸರ ಸೋಗಿನಲ್ಲಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತಮಿಳುನಾಡಿನ ಪುದುಕೋಟ್ಟೈ ನಗರದಲ್ಲಿ ನಡೆದಿದೆ.
ವಿದ್ಯಾರ್ಥಿಗೆ ಕರೆ ಮಾಡಿದ್ದ ಇಬ್ಬರು ವ್ಯಕ್ತಿಗಳು ತಾವು ಚೆನ್ನೈ ಸೈಬರ್ ಕ್ರೈಮ್ ಬ್ರಾಂಚ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ನೀನು ಮೊಬೈಲಿನಲ್ಲಿ ಬ್ಲೂ ಫಿಲಂ ನೋಡಿದ್ದೀಯಾ ಎಂದು ಬ್ಲಾಕ್ಮೇಲ್ ಮಾಡಿದ್ದು, ಹುಡುಗನನ್ನು ವಶಕ್ಕೆ ಪಡೆಯುವುದಾಗಿ ಹೆದರಿಸಿದ್ದಾರೆ. ಆನಂತರ 20 ಸಾವಿರ ಹಣ ಕೊಟ್ಟರೆ ಬಿಟ್ಟು ಬಿಡುವುದಾಗಿ ಹೇಳಿದ್ದರು. ಅದರಂತೆ, ಹುಡುಗ ತಂದೆಯ ಖಾತೆಯಿಂದ ಹಣ ಕಳಿಸಿದ್ದಾನೆ.

ಹಣ ಕಳೆದುಕೊಂಡ ವಿಷಯ ತಂದೆಗೆ ಗೊತ್ತಾಗುತ್ತಿದ್ದಂತೆ ಹುಡುಗನ್ನು ನಿಜ ವಿಚಾರ ಕೇಳಿದ್ದಾರೆ. ಹುಡುಗ ಎಲ್ಲವನ್ನೂ ಹೇಳುತ್ತಲೇ ಈ ಬಗ್ಗೆ ಹುಡುಗನ ತಂದೆ, ತನ್ನ ಸ್ನೇಹಿತರಿಗೆ ತಿಳಿಸಿದ್ದು, ಇದರಲ್ಲೇನೋ ಮೋಸ ಅಡಗಿದೆ ಎನ್ನುವ ಬಗ್ಗೆ ಸಂಶಯ ಬಂದಿದೆ. ಕೂಡಲೇ ಪುದುಕೋಟ್ಟೈ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೆ ಮಾಡಿದ ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ, ಖದೀಮರು ಸಿಕ್ಕಿಬಿದ್ದಿದ್ದಾರೆ.
ಆಬಳಿಕ ನೈಜ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳ ಹಿಂದೆ ಬಿದ್ದು ಅರೆಸ್ಟ್ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಗಣೇಶನ್ ಮತ್ತು ಪ್ರಕಾಶ್ ಬಂಧಿತರಾಗಿದ್ದು, ಅವರನ್ನು ಜೈಲಿಗೆ ತಳ್ಳಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಹಲವು ವಿದ್ಯಾರ್ಥಿಗಳನ್ನು ಮೋಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರಿಗೆ ವಿದ್ಯಾರ್ಥಿಗಳ ಮೊಬೈಲ್ ನಂಬರ್ ಹೇಗೆ ಸಿಕ್ಕಿತ್ತು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ಕ್ಲಾಸ್ ಆಗಿರುವುದರಿಂದ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಬಳಕೆ ಹೆಚ್ಚಿದ್ದು, ಹೆಚ್ಚಿನ ಮಂದಿ ಬ್ಲೂ ಫಿಲಂ ನೋಡಲು ಬಳಸುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಇದೇ ವಿಚಾರವನ್ನು ಮುಂದಿಟ್ಟು ಖದೀಮರು ವಿದ್ಯಾರ್ಥಿಗಳಿಗೇ ಬಲೆ ಹಾಕಿದ್ದರು.
Two people were arrested in Tamil Nadu for posing as police officials, threatening a student and duping him of Rs 20,000 over watching porn. The accused confessed to have duped several students in this manner.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm