ಬ್ರೇಕಿಂಗ್ ನ್ಯೂಸ್
07-08-21 05:48 pm Headline Karnataka News Network ಕ್ರೈಂ
ಚೆನ್ನೈ, ಆಗಸ್ಟ್ 7: ಸೈಬರ್ ಕ್ರೈಮ್ ಪೊಲೀಸರ ಸೋಗಿನಲ್ಲಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತಮಿಳುನಾಡಿನ ಪುದುಕೋಟ್ಟೈ ನಗರದಲ್ಲಿ ನಡೆದಿದೆ.
ವಿದ್ಯಾರ್ಥಿಗೆ ಕರೆ ಮಾಡಿದ್ದ ಇಬ್ಬರು ವ್ಯಕ್ತಿಗಳು ತಾವು ಚೆನ್ನೈ ಸೈಬರ್ ಕ್ರೈಮ್ ಬ್ರಾಂಚ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ನೀನು ಮೊಬೈಲಿನಲ್ಲಿ ಬ್ಲೂ ಫಿಲಂ ನೋಡಿದ್ದೀಯಾ ಎಂದು ಬ್ಲಾಕ್ಮೇಲ್ ಮಾಡಿದ್ದು, ಹುಡುಗನನ್ನು ವಶಕ್ಕೆ ಪಡೆಯುವುದಾಗಿ ಹೆದರಿಸಿದ್ದಾರೆ. ಆನಂತರ 20 ಸಾವಿರ ಹಣ ಕೊಟ್ಟರೆ ಬಿಟ್ಟು ಬಿಡುವುದಾಗಿ ಹೇಳಿದ್ದರು. ಅದರಂತೆ, ಹುಡುಗ ತಂದೆಯ ಖಾತೆಯಿಂದ ಹಣ ಕಳಿಸಿದ್ದಾನೆ.

ಹಣ ಕಳೆದುಕೊಂಡ ವಿಷಯ ತಂದೆಗೆ ಗೊತ್ತಾಗುತ್ತಿದ್ದಂತೆ ಹುಡುಗನ್ನು ನಿಜ ವಿಚಾರ ಕೇಳಿದ್ದಾರೆ. ಹುಡುಗ ಎಲ್ಲವನ್ನೂ ಹೇಳುತ್ತಲೇ ಈ ಬಗ್ಗೆ ಹುಡುಗನ ತಂದೆ, ತನ್ನ ಸ್ನೇಹಿತರಿಗೆ ತಿಳಿಸಿದ್ದು, ಇದರಲ್ಲೇನೋ ಮೋಸ ಅಡಗಿದೆ ಎನ್ನುವ ಬಗ್ಗೆ ಸಂಶಯ ಬಂದಿದೆ. ಕೂಡಲೇ ಪುದುಕೋಟ್ಟೈ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೆ ಮಾಡಿದ ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ, ಖದೀಮರು ಸಿಕ್ಕಿಬಿದ್ದಿದ್ದಾರೆ.
ಆಬಳಿಕ ನೈಜ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳ ಹಿಂದೆ ಬಿದ್ದು ಅರೆಸ್ಟ್ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಗಣೇಶನ್ ಮತ್ತು ಪ್ರಕಾಶ್ ಬಂಧಿತರಾಗಿದ್ದು, ಅವರನ್ನು ಜೈಲಿಗೆ ತಳ್ಳಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಹಲವು ವಿದ್ಯಾರ್ಥಿಗಳನ್ನು ಮೋಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರಿಗೆ ವಿದ್ಯಾರ್ಥಿಗಳ ಮೊಬೈಲ್ ನಂಬರ್ ಹೇಗೆ ಸಿಕ್ಕಿತ್ತು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ಕ್ಲಾಸ್ ಆಗಿರುವುದರಿಂದ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಬಳಕೆ ಹೆಚ್ಚಿದ್ದು, ಹೆಚ್ಚಿನ ಮಂದಿ ಬ್ಲೂ ಫಿಲಂ ನೋಡಲು ಬಳಸುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಇದೇ ವಿಚಾರವನ್ನು ಮುಂದಿಟ್ಟು ಖದೀಮರು ವಿದ್ಯಾರ್ಥಿಗಳಿಗೇ ಬಲೆ ಹಾಕಿದ್ದರು.
Two people were arrested in Tamil Nadu for posing as police officials, threatening a student and duping him of Rs 20,000 over watching porn. The accused confessed to have duped several students in this manner.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm