ಬ್ರೇಕಿಂಗ್ ನ್ಯೂಸ್
07-08-21 05:48 pm Headline Karnataka News Network ಕ್ರೈಂ
ಚೆನ್ನೈ, ಆಗಸ್ಟ್ 7: ಸೈಬರ್ ಕ್ರೈಮ್ ಪೊಲೀಸರ ಸೋಗಿನಲ್ಲಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತಮಿಳುನಾಡಿನ ಪುದುಕೋಟ್ಟೈ ನಗರದಲ್ಲಿ ನಡೆದಿದೆ.
ವಿದ್ಯಾರ್ಥಿಗೆ ಕರೆ ಮಾಡಿದ್ದ ಇಬ್ಬರು ವ್ಯಕ್ತಿಗಳು ತಾವು ಚೆನ್ನೈ ಸೈಬರ್ ಕ್ರೈಮ್ ಬ್ರಾಂಚ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ನೀನು ಮೊಬೈಲಿನಲ್ಲಿ ಬ್ಲೂ ಫಿಲಂ ನೋಡಿದ್ದೀಯಾ ಎಂದು ಬ್ಲಾಕ್ಮೇಲ್ ಮಾಡಿದ್ದು, ಹುಡುಗನನ್ನು ವಶಕ್ಕೆ ಪಡೆಯುವುದಾಗಿ ಹೆದರಿಸಿದ್ದಾರೆ. ಆನಂತರ 20 ಸಾವಿರ ಹಣ ಕೊಟ್ಟರೆ ಬಿಟ್ಟು ಬಿಡುವುದಾಗಿ ಹೇಳಿದ್ದರು. ಅದರಂತೆ, ಹುಡುಗ ತಂದೆಯ ಖಾತೆಯಿಂದ ಹಣ ಕಳಿಸಿದ್ದಾನೆ.

ಹಣ ಕಳೆದುಕೊಂಡ ವಿಷಯ ತಂದೆಗೆ ಗೊತ್ತಾಗುತ್ತಿದ್ದಂತೆ ಹುಡುಗನ್ನು ನಿಜ ವಿಚಾರ ಕೇಳಿದ್ದಾರೆ. ಹುಡುಗ ಎಲ್ಲವನ್ನೂ ಹೇಳುತ್ತಲೇ ಈ ಬಗ್ಗೆ ಹುಡುಗನ ತಂದೆ, ತನ್ನ ಸ್ನೇಹಿತರಿಗೆ ತಿಳಿಸಿದ್ದು, ಇದರಲ್ಲೇನೋ ಮೋಸ ಅಡಗಿದೆ ಎನ್ನುವ ಬಗ್ಗೆ ಸಂಶಯ ಬಂದಿದೆ. ಕೂಡಲೇ ಪುದುಕೋಟ್ಟೈ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೆ ಮಾಡಿದ ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ, ಖದೀಮರು ಸಿಕ್ಕಿಬಿದ್ದಿದ್ದಾರೆ.
ಆಬಳಿಕ ನೈಜ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳ ಹಿಂದೆ ಬಿದ್ದು ಅರೆಸ್ಟ್ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಗಣೇಶನ್ ಮತ್ತು ಪ್ರಕಾಶ್ ಬಂಧಿತರಾಗಿದ್ದು, ಅವರನ್ನು ಜೈಲಿಗೆ ತಳ್ಳಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಹಲವು ವಿದ್ಯಾರ್ಥಿಗಳನ್ನು ಮೋಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರಿಗೆ ವಿದ್ಯಾರ್ಥಿಗಳ ಮೊಬೈಲ್ ನಂಬರ್ ಹೇಗೆ ಸಿಕ್ಕಿತ್ತು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ಕ್ಲಾಸ್ ಆಗಿರುವುದರಿಂದ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಬಳಕೆ ಹೆಚ್ಚಿದ್ದು, ಹೆಚ್ಚಿನ ಮಂದಿ ಬ್ಲೂ ಫಿಲಂ ನೋಡಲು ಬಳಸುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಇದೇ ವಿಚಾರವನ್ನು ಮುಂದಿಟ್ಟು ಖದೀಮರು ವಿದ್ಯಾರ್ಥಿಗಳಿಗೇ ಬಲೆ ಹಾಕಿದ್ದರು.
Two people were arrested in Tamil Nadu for posing as police officials, threatening a student and duping him of Rs 20,000 over watching porn. The accused confessed to have duped several students in this manner.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm