ಬ್ರೇಕಿಂಗ್ ನ್ಯೂಸ್
08-08-21 09:00 pm Bengaluru Correspondent ಕ್ರೈಂ
ಬೆಂಗಳೂರು, ಆಗಸ್ಟ್ 8; ಬಾಂಗ್ಲಾದೇಶಿಯರ ಅಕ್ರಮ ವಾಸದ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳು ಬೆಂಗಳೂರಿನ ಎರಡು ಕಡೆ ದಾಳಿ ನಡೆಸಿದ್ದು ನಕಲಿ ಐಡಿ, ದಾಖಲೆ ಪತ್ರಗಳನ್ನು ತಯಾರಿಸಿಕೊಡುತ್ತಿದ್ದ ಜಾಲವನ್ನು ಪತ್ತೆ ಮಾಡಿದ್ದಾರೆ.
ಬಾಂಗ್ಲಾದೇಶಿಯರಿಗೆ ನಕಲಿ ಐಡಿ ಕಾರ್ಡ್ ಮಾಡಿಕೊಡುತ್ತಿದ್ದ ವ್ಯಕ್ತಿಯ ಮನೆಗೆ ದಾಳಿ ನಡೆಸಿದ ಪೊಲೀಸರು, ಒಬ್ಬನನ್ನು ಬಂಧಿಸಿದ್ದಾರೆ. ನಕಲಿ ಐಡಿ ಕಾರ್ಡ್ ಗಳನ್ನು ಮಾಡಿಕೊಡಲು ಬಳಸುತ್ತಿದ್ದ ಆರು ಡಿಜಿಟಲ್ ಉಪಕರಣಗಳು, ಹಾರ್ಡ್, ಡಿಸ್ಕ್, ಮೊಬೈಲ್ ಫೋನ್ ಗಳು, ಐಡಿ ಕಾರ್ಡ್ ಮಾಡುವುದಕ್ಕಾಗಿ ರೆಡಿ ಮಾಡಿದ್ದ ಹಲವಾರು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಬಾಂಗ್ಲಾದೇಶಿ ಯುವತಿಯನ್ನು ಅತ್ಯಾಚಾರ ಮಾಡಿ, ವಿಕೃತವಾಗಿ ಬಳಸಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಬಳಿಕ ಪೊಲೀಸರು ಯುವತಿಯನ್ನು ಪತ್ತೆಮಾಡಿ, ಅದಕ್ಕೆ ಕಾರಣವಾಗಿದ್ದ ರಾಮಮೂರ್ತಿ ನಗರದಲ್ಲಿ ನೆಲೆಸಿದ್ದ ಆರು ಮಂದಿ ಬಾಂಗ್ಲಾನ್ನರನ್ನು ಬಂಧಿಸಿದ್ದರು. ಈ ವೇಳೆ, ಯುವತಿಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನ ಪಟ್ಟಿದ್ದು ಅದಕ್ಕೆ ನಿರಾಕರಿಸಿದ ಯುವತಿಯ ಮೇಲೆ ವಿಕೃತವಾಗಿ ಲೈಂಗಿಕ ಕಿರುಕುಳ ನೀಡಿದ್ದು ತಿಳಿದುಬಂದಿತ್ತು.
ಅಲ್ಲದೆ, ಅಕ್ರಮವಾಗಿ ನುಸುಳಿ ಬರುವ ಬಾಂಗ್ಲಾ ದೇಶಿ ನಿವಾಸಿಗಳಿಗೆ ಭಾರತೀಯ ಐಡಿ ಕಾರ್ಡ್ ಒದಗಿಸುತ್ತಿದ್ದ ಜಾಲದ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಯುವತಿಯರು, ಯುವಕರು ಭಾರತದ್ದೇ ದಾಖಲೆ ಪತ್ರಗಳನ್ನು ತಯಾರಿಸಿ ಪ್ರಮುಖ ನಗರಗಳಲ್ಲಿ ನೆಲೆಸುತ್ತಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ತನಿಖಾ ದಳ ತನಿಖೆಯನ್ನು ಕೈಗೆತ್ತಿಕೊಂಡಿದ್ದು ಪ್ರತ್ಯೇಕ ಎಫ್ಐಆರ್ ದಾಖಲು ಮಾಡಿತ್ತು.
Oficials of the National Investigation Agency (NIA) carried out searches in Bangalore in connection with a human trafficking case involving a group of Bangladeshi nationals and recovered incriminating documents, the agency said. The investigation agency raided two places on Saturday linked to a person suspected to be involved in creating fake IDs for Bangladeshi traffickers in the city, the NIA said in a statement.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm