ಬ್ರೇಕಿಂಗ್ ನ್ಯೂಸ್
05-09-20 05:33 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 5: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಡ್ರಗ್ಸ್ ನಂಟು ಕೂಡ ತಗ್ಲಾಕ್ಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸಹೋದರನನ್ನು ಅಧಿಕಾರಿಗಳು ಬಂಧಿಸಿದ್ದು ಸುಶಾಂತ್ ಕೂಡ ಡ್ರಗ್ಸ್ ಒಡನಾಟದಲ್ಲಿದ್ದರೇ ಅನುಮಾನ ಹುಟ್ಟಿಸಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುವ ಕಾರ್ಯದಲ್ಲಿ ಸಿಬಿಐ ಅಧಿಕಾರಿಗಳು ಮಗ್ನರಾಗಿದ್ದರೆ, ಇತ್ತ ರಿಯಾ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ರಿಯಾ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಿಯಾ ಸಹೋದರ ಶೋವಿಕ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಎನ್ಸಿಬಿ ಅಧಿಕಾರಿಗಳು ನಿನ್ನೆ ನಟಿ ರಿಯಾ, ಆಕೆಯ ಸಹೋದರ ಶೋವಿಕ್ ಮತ್ತು ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು ನಾಲ್ಕೈದು ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳ ತಂಡ ಬಳಿಕ ರಿಯಾ ಸಹೋದರ ಶೋವಿಕ್ ಹಾಗೂ ಮ್ಯಾನೇಜರ್ ಸ್ಯಾಮುಯೆಲ್ನನ್ನು ಬಂಧಿಸಿದ್ದರು. ಡ್ರಗ್ಸ್ ವಿಚಾರದಲ್ಲಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ವಿಫಲರಾದ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಡ್ರಗ್ ಡೀಲರ್ ಮಿಲಾತ್ರಾ, ಬಾಸಿತ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎನ್ಸಿಬಿ ಡೈರೆಕ್ಟರ್ ಎಂಕೆ ಜೈನ್, ರಿಯಾ ಸಹೋದರ ಶೋವಿಕ್ ನೀಡಿದ ಮಾಹಿತಿಯಂತೆ ಸ್ಯಾಮುವೆಲ್ ಡ್ರಗ್ಸ್ ಸಂಗ್ರಹಿಸಿರುವ ಬಗ್ಗೆ ತಿಳಿದುಬಂತು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸ್ಯಾಮುಯೆಲ್ನನ್ನು ಸುಶಾಂತ್ ಸಿಂಗ್ ಮನೆಯಲ್ಲಿ ಮ್ಯಾನೇಜರ್ ಆಗಿ ರಿಯಾ ನೇಮಕ ಮಾಡಿದ್ದಳು. ಆಕೆಯಾ ಕಾರಣದಿಂದಲೇ ಸುಶಾಂತ್ ಡ್ರಗ್ಸ್ ಸೇವನೆ ಆರಂಭಿಸಿದ್ದ ಎಂಬ ಸಂಶಯ ಹುಟ್ಟಿಕೊಂಡಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm