ಬ್ರೇಕಿಂಗ್ ನ್ಯೂಸ್
05-09-20 05:33 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 5: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಡ್ರಗ್ಸ್ ನಂಟು ಕೂಡ ತಗ್ಲಾಕ್ಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸಹೋದರನನ್ನು ಅಧಿಕಾರಿಗಳು ಬಂಧಿಸಿದ್ದು ಸುಶಾಂತ್ ಕೂಡ ಡ್ರಗ್ಸ್ ಒಡನಾಟದಲ್ಲಿದ್ದರೇ ಅನುಮಾನ ಹುಟ್ಟಿಸಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುವ ಕಾರ್ಯದಲ್ಲಿ ಸಿಬಿಐ ಅಧಿಕಾರಿಗಳು ಮಗ್ನರಾಗಿದ್ದರೆ, ಇತ್ತ ರಿಯಾ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ರಿಯಾ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಿಯಾ ಸಹೋದರ ಶೋವಿಕ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಎನ್ಸಿಬಿ ಅಧಿಕಾರಿಗಳು ನಿನ್ನೆ ನಟಿ ರಿಯಾ, ಆಕೆಯ ಸಹೋದರ ಶೋವಿಕ್ ಮತ್ತು ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು ನಾಲ್ಕೈದು ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳ ತಂಡ ಬಳಿಕ ರಿಯಾ ಸಹೋದರ ಶೋವಿಕ್ ಹಾಗೂ ಮ್ಯಾನೇಜರ್ ಸ್ಯಾಮುಯೆಲ್ನನ್ನು ಬಂಧಿಸಿದ್ದರು. ಡ್ರಗ್ಸ್ ವಿಚಾರದಲ್ಲಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ವಿಫಲರಾದ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಡ್ರಗ್ ಡೀಲರ್ ಮಿಲಾತ್ರಾ, ಬಾಸಿತ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎನ್ಸಿಬಿ ಡೈರೆಕ್ಟರ್ ಎಂಕೆ ಜೈನ್, ರಿಯಾ ಸಹೋದರ ಶೋವಿಕ್ ನೀಡಿದ ಮಾಹಿತಿಯಂತೆ ಸ್ಯಾಮುವೆಲ್ ಡ್ರಗ್ಸ್ ಸಂಗ್ರಹಿಸಿರುವ ಬಗ್ಗೆ ತಿಳಿದುಬಂತು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸ್ಯಾಮುಯೆಲ್ನನ್ನು ಸುಶಾಂತ್ ಸಿಂಗ್ ಮನೆಯಲ್ಲಿ ಮ್ಯಾನೇಜರ್ ಆಗಿ ರಿಯಾ ನೇಮಕ ಮಾಡಿದ್ದಳು. ಆಕೆಯಾ ಕಾರಣದಿಂದಲೇ ಸುಶಾಂತ್ ಡ್ರಗ್ಸ್ ಸೇವನೆ ಆರಂಭಿಸಿದ್ದ ಎಂಬ ಸಂಶಯ ಹುಟ್ಟಿಕೊಂಡಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm