ಬ್ರೇಕಿಂಗ್ ನ್ಯೂಸ್
10-08-21 01:25 pm Headline Karnataka News Network ಕ್ರೈಂ
ಥಾಣೆ, ಆಗಸ್ಟ್ 10: ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಹದಿನೈದು ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯೊಂದಿಗೆ ಜಗಳವಾಡಿ, ಕೊನೆಗೆ ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನವಿ ಮುಂಬೈ ಉಪನಗರದಲ್ಲಿ ನಡೆದಿದೆ.
ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಹುಡುಗಿ ಹೇಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರದಲ್ಲಿ, ಈ ಬಾಲಕಿ ಮತ್ತು ತಾಯಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ತಾಯಿ, ತನ್ನ ಮಗಳು ವೈದ್ಯಕೀಯ ಪದವಿ ಓದಬೇಕೆಂದು ಬಯಸಿದ್ದರು. ಮಗಳಿಗೆ ಇದು ಇಷ್ಟವಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ರಬಾಲೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ತಾಯಿ–ಮಗಳ ಘರ್ಷಣೆ ಒಮ್ಮೆ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಕಳೆದ ತಿಂಗಳು ಈ ಬಾಲಕಿ, ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಳು. ಪೊಲೀಸರು ಬಾಲಕಿಯ ಕುಟುಂಬದ ಸದಸ್ಯರನ್ನು ಠಾಣೆಗೆ ಕರೆಸಿ, ಮಾತುಕತೆ ನಡೆಸಿ ಕಳಿಸಿಕೊಟ್ಟಿದರು. ನಂತರ ಜುಲೈ 30ರಂದು ಇದೇ ಬಾಲಕಿ, ‘ತನ್ನ ತಾಯಿ ಮೇಲಿಂದ ಬಿದ್ದು ಸತ್ತು ಹೋಗಿದ್ದಾರೆ‘ ಎಂದು ಪೊಲೀಸರಿಗೆ ತಿಳಿಸಿದ್ದಳು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಕಳಿಸಿದರು. ಪರೀಕ್ಷೆ ವರದಿ ಪರಿಶೀಲಿಸಿದಾಗ, ಕುತ್ತಿಗೆ ಹಿಸುಕಿದ್ದರಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿತು. ನಂತರ ಪೊಲೀಸರು ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ, ‘ತಾಯಿ, ತನ್ನೊಂದಿಗೆ ಜಗಳವಾಡಿದಾಗ, ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿದೆ‘ ಎಂದು ಒಪ್ಪಿಕೊಂಡಿದ್ದಾಳೆ. ಬಾಲಕಿಯನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 302ರ ಪ್ರಕಾರ ಮೊಕದ್ದಮೆ ದಾಖಲಿಸಲಾಗಿದೆ.
A 15-year-old girl allegedly strangulated her mother to death with a karate belt after a fight over her studies in Navi Mumbai, police said on Tuesday. The girl later tried to pass it off as a case of accidental death, they said.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm