ಬ್ರೇಕಿಂಗ್ ನ್ಯೂಸ್
10-08-21 01:25 pm Headline Karnataka News Network ಕ್ರೈಂ
ಥಾಣೆ, ಆಗಸ್ಟ್ 10: ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಹದಿನೈದು ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯೊಂದಿಗೆ ಜಗಳವಾಡಿ, ಕೊನೆಗೆ ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನವಿ ಮುಂಬೈ ಉಪನಗರದಲ್ಲಿ ನಡೆದಿದೆ.
ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಹುಡುಗಿ ಹೇಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರದಲ್ಲಿ, ಈ ಬಾಲಕಿ ಮತ್ತು ತಾಯಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ತಾಯಿ, ತನ್ನ ಮಗಳು ವೈದ್ಯಕೀಯ ಪದವಿ ಓದಬೇಕೆಂದು ಬಯಸಿದ್ದರು. ಮಗಳಿಗೆ ಇದು ಇಷ್ಟವಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ರಬಾಲೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ತಾಯಿ–ಮಗಳ ಘರ್ಷಣೆ ಒಮ್ಮೆ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಕಳೆದ ತಿಂಗಳು ಈ ಬಾಲಕಿ, ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಳು. ಪೊಲೀಸರು ಬಾಲಕಿಯ ಕುಟುಂಬದ ಸದಸ್ಯರನ್ನು ಠಾಣೆಗೆ ಕರೆಸಿ, ಮಾತುಕತೆ ನಡೆಸಿ ಕಳಿಸಿಕೊಟ್ಟಿದರು. ನಂತರ ಜುಲೈ 30ರಂದು ಇದೇ ಬಾಲಕಿ, ‘ತನ್ನ ತಾಯಿ ಮೇಲಿಂದ ಬಿದ್ದು ಸತ್ತು ಹೋಗಿದ್ದಾರೆ‘ ಎಂದು ಪೊಲೀಸರಿಗೆ ತಿಳಿಸಿದ್ದಳು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಕಳಿಸಿದರು. ಪರೀಕ್ಷೆ ವರದಿ ಪರಿಶೀಲಿಸಿದಾಗ, ಕುತ್ತಿಗೆ ಹಿಸುಕಿದ್ದರಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿತು. ನಂತರ ಪೊಲೀಸರು ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ, ‘ತಾಯಿ, ತನ್ನೊಂದಿಗೆ ಜಗಳವಾಡಿದಾಗ, ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿದೆ‘ ಎಂದು ಒಪ್ಪಿಕೊಂಡಿದ್ದಾಳೆ. ಬಾಲಕಿಯನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 302ರ ಪ್ರಕಾರ ಮೊಕದ್ದಮೆ ದಾಖಲಿಸಲಾಗಿದೆ.
A 15-year-old girl allegedly strangulated her mother to death with a karate belt after a fight over her studies in Navi Mumbai, police said on Tuesday. The girl later tried to pass it off as a case of accidental death, they said.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am