ಬ್ರೇಕಿಂಗ್ ನ್ಯೂಸ್
10-08-21 01:35 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 10 : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರಾಜ್ಯ ಡ್ರಗ್ಸ್ ದಂಧೆಕೋರರನ್ನು ಸಿ.ಟಿ. ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದು, 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ರಾಜಸ್ಥಾನ ಮೂಲದ ಪಪ್ಪುರಾಮ್ ಅಲಿಯಾಸ್ ಪಪ್ಪು (20), ಚುನ್ನಿಲಾಲ್ (20) ಬಂಧಿತರು. ಆರೋಪಿಗಳಿಂದ ಒಂದು ಕೆ.ಜಿ 820 ಗ್ರಾಂ ಬ್ರೌನ್ ಶುಗರ್, 859 ಗ್ರಾಂ ಎಂಡಿಎಂಎ, ಒಂದು ಕೆಜಿ ಮಿಕ್ಸಿಂಗ್ ಪೌಡರ್, 1,700 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರು, ದ್ವಿಚಕ್ರ ವಾಹನ, ಎರಡು ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಮಾದಕ ವಸ್ತುವಿನ ಮೌಲ್ಯ ರೂ.2 ಕೋಟಿ ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಎಂ. ಪಾಟೀಲ್ ಅವರು ಹೇಳಿದ್ದಾರೆ.

ಬಂಧಿತ ಪಪ್ಪುರಾಮ್ ಬಿಎ ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. ಆರೋಪಿಗಳು ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು. ತಮ್ಮ ಪರಿಚಿತ ಗ್ರಾಹಕರಿಗೆ ಮಾತ್ರ ಮಾರಾಟ ಮಾಡುತ್ತಿದ್ದರು. ಪೊಲೀಸರಿಗೆ ಸುಳಿವು ಸಿಗಬಾರದು ಎಂಬ ಕಾರಣದಿಂದ ಹೊಸಬರಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು ಇವರಿಗಾಗಿ ಶೋಧ ನಡೆಸುತ್ತಿದ್ದರು.
ಆರೋಪಿಗಳಿಬ್ಬರು ಗೋಡೌನ್ ಸ್ಟ್ರೀಟ್ ನಲ್ಲಿ ಭಾನುವಾರ ಸಂಜೆ 5.30ರ ಸುಮಾರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರ ತಂಡಕ್ಕೆ ಮಾಹಿತಿ ಲಭ್ಯವಾಗಿತ್ತು. ಕಾರ್ಯಾಚರಣೆ ನಡೆಸಿದ ಇನ್ಸ್ ಪೆಕ್ಟರ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.
ಪಪ್ಪುರಾಮ್ ಚಂದಾಪುರ, ಆನೇಕಲ್ ಭಾಗದಲ್ಲಿ ಮನೆ ಮಾಡುತ್ತಿದ್ದ. ಪ್ರತಿ ಮೂರು ತಿಂಗಳಿಗೊಮ್ಮೆ ಮನೆ ಹಾಗೂ ಸಿಮ್ ಕಾರ್ಡ್ ಬದಲಿಸುತ್ತಿದ್ದ. ಮಾದಕ ವಸ್ತುವನ್ನು ಸಂಗ್ರಹಿಸಿ ಇಡಲು ಒಂದು ಸಣ್ಣ ರೂಮ್ ಮಾಡಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The City Market police have arrested two men from Rajasthan for drug peddling, and have seized drugs worth Rs 2 crore. The duo, Pappuram alias Raj alias Ravi Purohit and Chunnilal alias Sunil, are both aged 20 years, and hail from Rajasthan. They are residents of Attibele.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm