ಬ್ರೇಕಿಂಗ್ ನ್ಯೂಸ್
14-08-21 01:38 pm Headline Karnataka News Network ಕ್ರೈಂ
ಚಾಮರಾಜನಗರ, ಆ.14: ಪ್ರೀತಿಸಿದ ಯುವತಿ ತನ್ನನ್ನು ನಿರಾಕರಿಸುತ್ತಿದ್ದಳು ಎಂಬ ಕಾರಣಕ್ಕೆ ಯುವಕನೊಬ್ಬ ಯುವತಿಯನ್ನು ಕಾರಿನಲ್ಲಿ ಕೂರಿಸಿಕೊಂಡೇ ಬೆಂಕಿ ಹಚ್ಚಿಕೊಂಡು ಇಬ್ಬರೂ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಶ್ರೀನಿವಾಸ್ (23) ಹಾಗೂ ಅದೇ ಗ್ರಾಮದ ಕಾಂಚನಾ (22) ಮೃತಪಟ್ಟವರು.
ಕಾರಿನ ಒಳಭಾಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಬಗ್ಗೆ ಪೊಲೀಸರು ಶಂಕಿಸಿದ್ದು, ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದೇ ಸೀಟಿನಲ್ಲಿ ಇಬ್ಬರ ತಲೆಬುರುಡೆಗಳು ಮಾತ್ರ ಕಂಡುಬಂದಿವೆ.
ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದರೆ, ಶ್ರೀನಿವಾಸ್ ಕ್ಯಾಬ್ ಚಾಲಕನಾಗಿದ್ದ. ಈ ಹಿಂದೆ ಶಿಕ್ಷಣ ಪಡೆಯುತ್ತಿದ್ದಾಗ ಇಬ್ಬರೂ ಸಹಪಾಠಿಗಳಾಗಿದ್ದರು. ಶ್ರೀನಿವಾಸ್, ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು ಯುವತಿಯ ಕುಟುಂಬದವರಿಗೆ ಇದು ಇಷ್ಟವಿರಲಿಲ್ಲ. ಹಾಗಾಗಿ, ಕಾಂಚನಾ ಕೂಡ ಶ್ರೀನಿವಾಸ್ ನಿಂದ ದೂರ ಇದ್ದಳು ಎನ್ನಲಾಗುತ್ತಿದೆ.



ಇದರಿಂದ ಬೇಸತ್ತಿದ್ದ ಶ್ರೀನಿವಾಸ್, ಕಾಂಚನಾರನ್ನು ಕಾರಿನಲ್ಲಿ ಕೂರಿಸಿಕೊಂಡು ಮಾಂಬಳ್ಳಿಯಿಂದ ಕಿನಕಳ್ಳಿಗೆ ಹೋಗುವ ಮುಖ್ಯ ರಸ್ತೆಯಿಂದ ಎರಡು ಕಿ.ಮೀ. ದೂರದಲ್ಲಿ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ, ಒಳಗೆ ಕುಳಿತುಕೊಂಡೇ ಬೆಂಕಿ ಹಚ್ಚಿಕೊಂಡಿದ್ದಾರೆನ್ನಲಾಗಿದೆ. ಪಕ್ಕದ ಜಮೀನಿನಲ್ಲಿ ಹಸು ಮೇಯಿಸಿಕೊಂಡಿದ್ದ ವ್ಯಕ್ತಿಯೊಬ್ಬರು, ಕಾರು ಉರಿಯುತ್ತಿದ್ದುದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಬಂದಾಗ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರಬಹುದು ಎಂದು ಭಾವಿಸಿದ್ದರು. ಆದರೆ, ಹತ್ತಿರ ಹೋಗಿ ನೋಡಿದಾಗ ಒಳಗಡೆ ಎರಡು ತಲೆ ಬುರುಡೆಗಳು ಕಂಡುಬಂದಿದ್ದು ಕಾರಿನ ಬಾಗಿಲು ಲಾಕ್ ಆಗಿತ್ತು.
ಆರಂಭದಲ್ಲಿ ಪ್ರೇಮಿಗಳ ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ, ವಿಚಾರಣೆ ನಡೆಸಿದಾಗ ಶ್ರೀನಿವಾಸ್ ಅವರನ್ನು ಮದುವೆಯಾಗುವುದು ಕಾಂಚನಾ ಕುಟುಂಬದವರಿಗೆ ಇಷ್ಟ ಇರಲಿಲ್ಲ ಹಾಗಾಗಿ ಕಾಂಚನಾ, ದೂರವಾಗಿದ್ದರು ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಇದೇ ವಿಚಾರದಲ್ಲಿ ಮೂರು ತಿಂಗಳ ಹಿಂದೆಯೂ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
20-03-26 03:39 pm
HK News Staffer
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm