ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
20-03-26 03:39 pm
HK News Staffer
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm