ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm