ಬ್ರೇಕಿಂಗ್ ನ್ಯೂಸ್
16-08-21 05:59 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 16: ಬಂದೂಕು, ಭರ್ಚಿ ಹಿಡಿದು ಕಾಡು ಹಂದಿ ಹಿಡಿಯಲು ಹೋದವರು ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದಿದ್ದು, ಪ್ರಕರಣ ಸಂಬಂಧಿಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಕೊಡ್ಯಡ್ಕ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಎರಡು ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿ ಕಾರಿನಲ್ಲಿ ಕಾಡು ಹಂದಿಯನ್ನು ಹಿಡಿಯಲು ಬಲೆ, ಕೋವಿ, ಬಂದೂಕು ಇನ್ನಿತರ ವಸ್ತುಗಳನ್ನು ಸೇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.
ಕಾರಿನಲ್ಲಿದ್ದ ಎರಡು ಕಾಡು ಹಂದಿ, ನಾಲ್ಕು ಎಸ್ ಬಿಬಿಎಲ್ ಬಂದೂಕು, ಕಾಡು ಹಂದಿಯನ್ನು ಕೊಲ್ಲಲು ಬಳಸಿದ್ದ ಎರಡು ಬಂದೂಕಿನ ತೋಟೆಗಳು, ಬಲೆಗಳು, ಕಬ್ಬಿಣದ ಭರ್ಚಿ, ಹಂದಿಯನ್ನು ಮಾಂಸ ಮಾಡಲು ಬಳಸಿದ ದೊಡ್ಡ ಹಲಗಿನ ಮೂರು ಕತ್ತಿ, ಮೂರು ದೊಡ್ಡ ಚೂರಿಗಳು, ಗ್ಯಾಸ್ ಸಿಲಿಂಡರ್, ಕಾಡು ಹಂದಿಯನ್ನು ಚರ್ಮವನ್ನು ಸುಡಲ ಬಳಸಿದ್ದ ಗ್ಯಾಸ್ ಬರ್ನರ್, ಮರದ ದೊಣ್ಣೆಗಳು, ಕಬ್ಬಿಣದ ಟೇಬಲ್, ಎರಡು ಓಮ್ನಿ ಕಾರು, 12 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಾನ್ ಮಿನೇಜಸ್, ಶ್ರೀನಿವಾಸ, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜ, ಅಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ ಪೂಜಾರಿ, ರಮೇಶ್, ಗಣೇಶ್ ಎಂದು ಗುರುತಿಸಲಾಗಿದೆ. ರಸ್ತೆ ಮಧ್ಯೆ ಕತ್ತಿ, ದೊಣ್ಣೆ ಇಟ್ಟುಕೊಂಡು ತೆರಳುತ್ತಿದ್ದ ಕಾರಣಕ್ಕೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Moodbidri Police arrest 12 persons for hunting wild boar animals, deadly weapons seized.
02-04-25 03:07 pm
Bangalore Correspondent
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
02-04-25 04:11 pm
Mangalore Correspondent
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm