ಬ್ರೇಕಿಂಗ್ ನ್ಯೂಸ್
06-09-20 01:54 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನ ಸಿಸಿಬಿ ಕಚೇರಿಯ ಮುಂದೆ ಇಂದು ಬೆಳ್ಳಂಬೆಳಗ್ಗೆ ಹೈಡ್ರಾಮಾ ಸೃಷ್ಟಿಯಾಗಿದ್ದು,ಬೈಕ್ ನಲ್ಲಿ ಬಂದ ಯುವಕನೊಬ್ಬ ಡ್ರಗ್ಸ್ ದಂಧೆಯಲ್ಲಿ ನಾನೂ ಭಾಗಿಯಾಗಿದ್ದೇನೆ, ನಟಿ ರಾಗಿಣಿ ಮತ್ತು ನಾನು ಕ್ಲೋಸ್ ಇದ್ದೇವೆ. ಅವರ ಜೊತೆ ಫೋಟೋ ದಲ್ಲಿ ಇರುವುದು ನಾನೇ. ನಿಮಗೆ ಬೇಕಾದ 13ನೇ ಆರೋಪಿ ನಾನೇ…ಅರೆಸ್ಟ್ ಮಾಡಿ…ಎಂದು ಹೇಳಿ ಕೆಲ ಕಾಲ ಗೊಂದಲ ಸೃಷ್ಟಿಸಿದ್ದಾನೆ.
ಮಾದಕ ವಸ್ತು ಪೂರೈಕೆ ಜಾಲದ ಕುರಿತಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ. ಸದ್ಯ ಇವರು ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದು, ಈ ನಡುವೆಯೇ ಯುವಕ ಕಚೇರಿ ಎದುರು ಬಂದು ಹೈಡ್ರಾಮಾ ಮಾಡಿದ್ದಾನೆ. ಇಲ್ಲಿಯವರೆಗೆ ಒಟ್ಟು 12 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು, 13ನೆಯವ ನಾನೇ ಎಂದಿರುವ ಯುವಕ, ನನ್ನನ್ನು ಅರೆಸ್ಟ್ ಮಾಡಿ ಎಂದು ಗೋಗರೆದಿದ್ದಾನೆ! ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಯುವಕನ ಹೆಸರು ಅನಿರುದ್ಧ್ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನ ಜಯನಗರ ಆರ್ಟಿಒ ಕಚೇರಿಯ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ. ಈತ ರಾಗಿಣಿ ಆಪ್ತ ರವಿಶಂಕರ್ನ ಸ್ನೇಹಿತ ಎಂದು ತಿಳಿದುಬಂದಿದೆ. ಇದೇ ಆರ್ಟಿಒ ಕಚೇರಿಯಲ್ಲಿ ರವಿಶಂಕರ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದನು. ಸಿಸಿಬಿ ಪೊಲೀಸ್ ಕಚೇರಿಗೆ ಬಂದಿದ್ದ ಸಂದರ್ಭದಲ್ಲಿ ಅನಿರುದ್ಧ್ ಡ್ರಗ್ಸ್ ಸೇವನೆ ಮಾಡಿದ್ದ ಎಂದಿದ್ದಾರೆ ಪೊಲೀಸರು.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am