ಬ್ರೇಕಿಂಗ್ ನ್ಯೂಸ್
17-08-21 01:50 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 17: ಆಸ್ಪತ್ರೆಯಲ್ಲಿದ್ದ ಪತಿಯ ನೆರವಿಗೆ ಬಂದಿದ್ದ ಪತ್ನಿ ಹಾಗೂ ಆಕೆಯ ತಂಗಿಯ ಮೇಲೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಹಾಗೂ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದಿನ ಗಾಂಧಿ ಆಸ್ಪತ್ರೆಯಲ್ಲಿ ನಡೆದಿದೆ.
ಸಂತ್ರಸ್ತೆಯ ಪುತ್ರ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಚಿಕಿತ್ಸೆಗೆಂದು ಬಂದಿದ್ದ ತಾಯಿ ಹಾಗೂ ಚಿಕ್ಕಮ್ಮ ಆಸ್ಪತ್ರೆಯಲ್ಲಿ ಇರಲಿಲ್ಲ. ಇಬ್ಬರನ್ನು ಹುಡುಕಾಡಿದಾಗ ಆಕೆಯ ಚಿಕ್ಕಮ್ಮ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವುದು ಕಂಡುಬಂದಿದೆ. ಆಕೆಯನ್ನು ಮೆಹಬೂಬನಗರಕ್ಕೆ ಕರೆದುಕೊಂಡು ಹೋದಾಗ ಆಸ್ಪತ್ರೆಯಲ್ಲಿ ನಡೆದಿರುವ ದೌರ್ಜನ್ಯ ವಿವರಿಸಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಲಕಲುಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೆಹಬೂಬನಗರ ಜಿಲ್ಲೆಯ ವ್ಯಕ್ತಿಯನ್ನು ಆಗಸ್ಟ್ 5 ರಂದು ಮೂತ್ರಪಿಂಡ ಕಾಯಿಲೆಯ ಚಿಕಿತ್ಸೆಗಾಗಿ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪತ್ನಿ ಮತ್ತು ಆಕೆಯ ಸಹೋದರಿ ರೋಗಿಗೆ ಸಹಾಯಕ್ಕಾಗಿ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯ ರೇಡಿಯೋಗ್ರಾಫರ್, ಆರೋಪಿ ಉಮಾಮಹೇಶ್ವರ್ ಮಹಿಳೆಯ ಸಂಬಂಧಿಯಾಗಿದ್ದು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಉಮಾಮಹೇಶ್ವರ್ ಈ ತಿಂಗಳ 8ರಂದು ಮಹಿಳೆಯರನ್ನು ಕೋಣೆಯೊಂದಕ್ಕೆ ಕರೆದುಕೊಂಡು ಹೋಗಿ ವೈನ್ನಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿದ್ದಾನೆ. ಅವರು ಪ್ರಜ್ಞಾಹೀನ ಸ್ಥಿತಿಗೆ ಹೋದ ನಂತರ ಉಮಾಮಹೇಶ್ವರ ಇತರರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪವಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿಮ್ಮ ತಾಯಿ ಹಾಗೂ ಚಿಕ್ಕಮ್ಮನನ್ನು ಕೊಲ್ಲುವುದಾಗಿ ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದನಂತೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಪೊಲೀಸರು ಆರೋಪಿ ಉಮಾಮಹೇಶ್ವರ್ ಸೇರಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಇನ್ನೊಬ್ಬ ಮಹಿಳೆ ನಾಪತ್ತೆಯಾಗಿದ್ದು, ಆಕೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿ ಉಮಾಮಹೇಶ್ವರ್ ಮತ್ತು ಇತರರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಸ್ಪತ್ರೆಯ ಅಧೀಕ್ಷಕ ಡಾ.ರಾಜಾರಾವ್ ಘಟನೆಯ ತನಿಖೆಗೆ ಆದೇಶಿಸಿದ್ದಾರೆ.
In a shocking incident, a lab technician at Gandhi Hospital allegedly raped two sisters, aged 38 and 40, from Mahabubnagar district and confined one of them in a room for four days. The technician’s friend also allegedly raped one of the sisters.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm