ಬ್ರೇಕಿಂಗ್ ನ್ಯೂಸ್
18-08-21 10:49 am Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 18: ವೃದ್ಧಾಶ್ರಮಕ್ಕೆ ಸೇರಿದ ವಯೋವೃದ್ಧೆಯನ್ನು ಊಟ ನೀಡದೇ ಸತಾಯಿಸಿದ್ದಲ್ಲದೆ, ಆಕೆ ಕೊಲೆಯಾದ ಸಂಗತಿಯನ್ನು ಬಚ್ಚಿಟ್ಟು ಸಾಕ್ಷ್ಯ ನಾಶ ಮಾಡಿದ ಆರೋಪದಡಿ ವೃದ್ದಾಶ್ರಮ ಮಾಲೀಕ ಸೇರಿದಂತೆ ಐವರು ಆರೋಪಿಗಳನ್ನು ಆರ್ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.
ರಾಮಚಂದ್ರ ಎಂಬುವರು ದೂರು ನೀಡಿದ ಮೇರೆಗೆ ಉಸೂರು ವೃದ್ಧಾಶ್ರಮ ಮಾಲೀಕ ಯೊಗೇಶ್, ವಾರ್ಡನ್ ಭಾಸ್ಕರ್, ಜಾನ್, ಮಂಜು ಹಾಗೂ ಸಿಬ್ಬಂದಿ ಜಾನ್, ಮಂಜು ಹಾಗೂ ವಸಂತ ಎಂಬುವರನ್ನು ಬಂಧಿಸಲಾಗಿದೆ.
ಕಮಲಮ್ಮ ಹತ್ಯೆಯಾದ ದುದೈರ್ವಿ. ವಯೋ ಸಹಜವಾಗಿ ಮರೆವಿನ ಕಾಯಿಲೆ ಇದ್ದಿದ್ದರಿಂದ ಕಳೆದ ಮಾರ್ಚ್ ತಿಂಗಳಲ್ಲಿ ನಾಗರಭಾವಿಯಲ್ಲಿರುವ ಉಸೂರು ವೃದ್ಧಾಶ್ರಮಕ್ಕೆ ಸೇರಿಸಿದ್ದರು. ಪ್ರತಿ ತಿಂಗಳು 10 ಸಾವಿರ ಪಾವತಿಸುತ್ತಿದ್ದರು. ಆಗಾಗ ಆಶ್ರಮಕ್ಕೆ ಬಂದು ಹೋಗುತ್ತಿದ್ದರು.

ಕಳೆದ 20 ದಿನಗಳ ಹಿಂದೆ ಮನೆಯವರಿಗೂ ತಿಳಿಸದೇ ಗೊರಗುಂಟೆಪಾಳ್ಯದಲ್ಲಿರುವ ಆಶ್ರಮಕ್ಕೆ ಕಮಲಮ್ಮ ಅವರನ್ನು ಶಿಫ್ಟ್ ಮಾಡಲಾಗಿತ್ತು. ಬಳಿಕ ನಿಮ್ಮ ತಾಯಿಗೆ ಹುಷಾರಿಲ್ಲದ ಕಾರಣ ಮೃತ ಪಟ್ಟಿದ್ದಾರೆ ಎಂದು ಹೇಳಿ ಮಗನಿಗೆ ಆಶ್ರಮದವರು ಪೋನ್ ಮಾಡಿದ್ದಾರೆ. ಸ್ಥಳಕ್ಕೆ ಬಂದ ರಾಮಚಂದ್ರ, ತಾಯಿ ಶವ ಕಂಡಾಗ ಕಿವಿ, ತಲೆಭಾಗ ಹಾಗೂ ಕೈ ಮೇಲೆ ಗಾಯದ ಗುರುತು ನೋಡಿ ಅನುಮಾನ ವ್ಯಕ್ತಪಡಿಸಿದ್ದರು. ಈ ಸಂಬಂಧ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅಸಲಿಗೆ ಆಶ್ರಮದಲ್ಲಿ ಆಗಿದ್ದೇನು ?: ಮರೆವಿನ ಕಾಯಿಲೆಯಿಂದ ಬಳುತ್ತಿದ್ದ ಕಮಲಮ್ಮ ಆಶ್ರಮದಲ್ಲಿ ಹೆಚ್ಚಾಗಿ ಕೂಗಾಡುತ್ತಿದ್ದರಂತೆ. ಇವರನ್ನು ನಿಯಂತ್ರಣದಲ್ಲಿ ಇರಿಸಲು ಇವರ ಜೊತೆ ಗಲಾಟೆ ಮಾಡುತ್ತಿದ್ದ ಇಬ್ಬರು ಮಹಿಳೆ ಸೇರಿದಂತೆ ಮೂವರನ್ನು ಒಂದೇ ರೂಮಿನಲ್ಲಿ ಕೂಡಿ ಹಾಕಿದ್ದಾರೆ.
ಅನ್ನ - ನೀರು ಕೊಡದೇ ಒಂದು ದಿನ ಕತ್ತಲೆ ರೂಮಿನಲ್ಲಿಯೇ ಇರಿಸಲಾಗಿದೆ. ಹಸಿವಿನಿಂದ ಬಳಲುತ್ತಿದ್ದ ಕಮಲಮ್ಮ, ಮತ್ತಷ್ಟು ಜೋರಾಗಿ ಕಿರುಚಿಕೊಂಡಾಗ ಜೊತೆಯಲ್ಲಿ ಇದ್ದ ವಸಂತ ಎಂಬುವರು ಅಲ್ಲೇ ಇದ್ದ ಚೇರ್ನಿಂದ ಹೊಡೆದಿದ್ದಾರೆ. ಪರಿಣಾಮ ಈ ವೇಳೆ ರಕ್ತಸ್ರಾವವಾಗಿ ಸ್ಥಳದಲ್ಲೇ ಕಮಲಮ್ಮ ಪ್ರಾಣ ಬಿಟ್ಟಿದ್ದಾರೆ.
ಈ ವಿಚಾರ ಆಶ್ರಮದವರಿಗೆ ಗೊತ್ತಾಗುತ್ತಿದ್ದಂತೆ ಕೊಲೆಯಾಗಿರುವ ವಿಷಯ ಮರೆ ಮಾಚಲು ಶವವನ್ನು ಬಚ್ಚಿಟ್ಟಿದ್ದಾರೆ. ತನಿಖೆ ಕೈಗೊಂಡಿದ್ದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಕಮಲಮ್ಮವಿದ್ದ ಕೊಠಡಿಗೂ ಕೊಲೆಯಾದ ಸ್ಥಳಕ್ಕೂ ಹೋಲಿಕೆಯೆ ಇರಲಿಲ್ಲ. ಈ ವೇಳೆ, ಪೊಲೀಸರು ಹುಡುಕಾಟ ನಡೆಸಿದಾಗ ಡಾರ್ಕ್ ರೂಂ ಪತ್ತೆಯಾಗಿದೆ. ಅಲ್ಲಿ ರಕ್ತದ ಕಲೆ ಹಾಗೂ ಹತ್ಯೆಯಾಗಿರುವ ಕುರುಹು ಹಾಗೂ ಸಿಬ್ಬಂದಿಯ ಅನುಮಾನಾಸ್ಪದ ವರ್ತನೆ ಕಂಡು ಗುಮಾನಿ ಮೇರೆಗೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾರೆ.
Bangalore Aged woman in Usuru Foundation Ashram killed after beating in chair five arrested. The deceased has been identified as Kamalamma.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm