ಬ್ರೇಕಿಂಗ್ ನ್ಯೂಸ್
06-09-20 02:17 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಮಗನಿಗೆ ಡ್ರಗ್ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ರಾಜಾಜಿನಗರದ ಕಾರ್ಪೋರೇಟರ್ ಕೇಶವ ಮೂರ್ತಿ ಮಗ ಯಶಸ್ ಮತ್ತು ಮುಂಬೈನಲ್ಲಿ ಬಂಧಿಯಾಗಿರುವ ಡ್ರಗ್ ಪೆಡ್ಲರ್ ಮಹಮ್ಮದ್ ರೆಹಮಾನ್ ನಡುವೆ ಸಂಪರ್ಕ ಇದ್ದುದು ಪತ್ತೆಯಾಗಿತ್ತು. ಹೀಗಾಗಿ ಬೆಂಗಳೂರಿಗೆ ಆಗಮಿಸಿದ್ದ ಎನ್ಸಿಬಿ ಅಧಿಕಾರಿಗಳು ಕಾರ್ಪೋರೇಟರ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ಸದ್ಯ ವಿಚಾರಣೆಗೆ ಹಾಜರಾಗಲು ಕಾರ್ಪೋರೇಟರ್ ಮಗನಿಗೆ ಎನ್ಸಿಬಿ ನೋಟಿಸ್ ನೀಡಿದೆ. ಮುಂಬೈ ಡ್ರಗ್ಸ್ ಪೆಡ್ಲರ್ ಮಹಮದ್ ರೆಹಮಾನ್ ಜತೆ ಸೇರಿ ಡ್ರಗ್ಸ್ ಖರೀದಿ ಮತ್ತು ಡ್ರಗ್ಸ್ ಮಾರಾಟ ಮಾಡಿರುವ ಅನುಮಾನದ ಮೇಲೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ. ಮುಂಬೈನ ಎನ್ಸಿಬಿ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಡ್ರಗ್ಸ್ ಪೆಡ್ಲಿಂಗ್ ಜೊತೆಗೆ ಈ ನಿಕಟವರ್ತಿಗಳಿಗೆ ಯಶಸ್ ಹಲವು ಬಾರಿ ಹಣ ವರ್ಗಾವಣೆ ಮಾಡಿರುವುದೂ ಪತ್ತೆಯಾಗಿದೆ. ಸದ್ಯ ಕೇಶವ ಮೂರ್ತಿ ಮಗ ಯಶಸ್ ನಾಪತ್ತೆಯಾಗಿದ್ದು, ಆತನಿಗಾಗಿ ಎನ್ಸಿಬಿ ಹುಡುಕಾಟ ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಪೊರೇಟರ್ ಕೇಶವಮೂರ್ತಿ, ಮಗನಿಗೆ ಧೈರ್ಯವಾಗಿರಲು ಹೇಳಿದ್ದೇನೆ. ಮಗ ತಪ್ಪು ಮಾಡಿಲ್ಲ. ಎರಡು ಬಾರಿ ಗೋವಾಗೆ ಹೋಗಿ ಬಂದಿದ್ದ. ಬಂಧಿತರ ಮೊಬೈಲ್ ನಲ್ಲಿ ಮಗನ ನಂಬರ್ ಇದ್ದ ಕಾರಣಕ್ಕೆ ವಿಚಾರಣೆಗೆ ಕರೆದಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm