ಬ್ರೇಕಿಂಗ್ ನ್ಯೂಸ್
21-08-21 06:39 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21: ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಪ್ರಸಂಗ ನಡೆದಿದ್ದು, ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ತನ್ನನ್ನು ಶ್ರೀನಿವಾಸ ಕೆ. ಎಂದು ಪರಿಚಯಿಸಿದ್ದ ವ್ಯಕ್ತಿ ಅದಕ್ಕಾಗಿ ಏಮ್ಸ್ ಆಸ್ಪತ್ರೆಯಲ್ಲಿ ಪ್ರೊಫೆಸರ್ ಮತ್ತು ಸರ್ಜನ್ ಆಗಿರುವ ಐಡಿ ಒಂದನ್ನು ತೋರಿಸಿದ್ದ. ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಹೊಟೇಲ್ ಸಿಟಿ ವಾಕ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದು ಕೊನೆಗೆ ಚೆಕ್ ಔಟ್ ವೇಳೆ, ಹಣ ಕೊಡದೆ ಪರಾರಿಯಾಗಿದ್ದ. ಹೊಟೇಲ್ ರೂಮ್ ಬಾಡಿಗೆ ನಾಲ್ಕು ಸಾವಿರ ರೂಪಾಯಿ ಆಗಬೇಕಿತ್ತು. ಈ ಬಗ್ಗೆ ಹೊಟೇಲಿನ ಮಾಲಕರೂ, ಮಂಗಳೂರು ಹೊಟೇಲ್ ಅಸೋಸಿಯೇಶನಲ್ಲಿ ಖಜಾಂಚಿಯೂ ಆಗಿರುವ ಅಬ್ರಾರ್ ಬಂದರು ಪೊಲೀಸರಿಗೆ ದೂರು ನೀಡಿದ್ದರು. ಆನಂತರ ಆತ ನೀಡಿದ್ದ ಐಡಿ ಕಾರ್ಡನ್ನು ಹೊಟೇಲ್ ಅಸೋಸಿಯೇಶನ್ ಗ್ರೂಪಲ್ಲಿ ಷೇರ್ ಮಾಡಿದ್ದರು.


ಈ ವೇಳೆ, ಅದೇ ವ್ಯಕ್ತಿ ನವಭಾರತ ವೃತ್ತದಲ್ಲಿರುವ ಪ್ಯಾಪಿಲಾನ್ ಪ್ಯಾಲೇಸ್ ಎನ್ನುವ ಹೊಟೇಲಿನಲ್ಲಿಯೂ ಇದೇ ರೀತಿ ಮೋಸ ಮಾಡಿದ್ದು ತಿಳಿದುಬಂದಿದೆ. ಸಿಟಿ ವಾಕ್ ಹೊಟೇಲಿಗೆ ಬರುವುದಕ್ಕೂ ಮುನ್ನ ಪ್ಯಾಪಿಲಾನ್ ಹೊಟೇಲಿಗೆ ತೆರಳಿದ್ದ. ಅಲ್ಲಿ ಒಂದಷ್ಟು ದಿನ ಇದ್ದುಕೊಂಡು ಬಳಿಕ ಅಲ್ಲಿಂದ ಹಣ ಕೊಡದೆ ತೆರಳಿದ್ದ. ಈ ವಿಚಾರ ತಿಳಿಯುತ್ತಲೇ ಹೊಟೇಲ್ ಅಸೋಸಿಯೇಶನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮತ್ತು ಜನರಲ್ ಸೆಕ್ರೆಟರಿ ನಿಶಾಂಕ್ ಸುವರ್ಣ, ಪ್ಯಾಪಿಲಾನ್ ಹೊಟೇಲಿಗೆ ಭೇಟಿ ನೀಡಿದ್ದು, ಬಂದರು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಎಸಿಪಿ ಪಿಎ ಹೆಗಡೆ ಮತ್ತು ಬಂದರು ಇನ್ ಸ್ಪೆಕ್ಟರ್ ರಾಘವೇಂದ್ರ ನಕಲಿ ವ್ಯಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸಿದಾಗ ಆತನಲ್ಲಿರುವುದು ಫೇಕ್ ಐಡಿಯೆಂದು ಗೊತ್ತಾಗಿದೆ. ಅಲ್ಲದೆ, ಈ ಹಿಂದೆ ಇದೇ ವ್ಯಕ್ತಿ ತಮಿಳುನಾಡಿನ ಸೇಲಂನಲ್ಲಿ ನಲಂದಾ ಎನ್ನುವ ಹೊಟೇಲ್ ನಲ್ಲಿ ಉಳಿದುಕೊಂಡು 15 ಸಾವಿರ ರೂ. ಮೋಸ ಮಾಡಿದ್ದ ಎನ್ನುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
Fake Doctor with Fake AIMS Medical ID held in Mangalore. The incident came to light after he escaped from a lodge in the city without making payment. The Bunder police have arrested the accused and have stated that he has done the same pattern with many lodges in India showing fake medical ID.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm