ಬ್ರೇಕಿಂಗ್ ನ್ಯೂಸ್
21-08-21 06:39 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21: ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಪ್ರಸಂಗ ನಡೆದಿದ್ದು, ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ತನ್ನನ್ನು ಶ್ರೀನಿವಾಸ ಕೆ. ಎಂದು ಪರಿಚಯಿಸಿದ್ದ ವ್ಯಕ್ತಿ ಅದಕ್ಕಾಗಿ ಏಮ್ಸ್ ಆಸ್ಪತ್ರೆಯಲ್ಲಿ ಪ್ರೊಫೆಸರ್ ಮತ್ತು ಸರ್ಜನ್ ಆಗಿರುವ ಐಡಿ ಒಂದನ್ನು ತೋರಿಸಿದ್ದ. ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಹೊಟೇಲ್ ಸಿಟಿ ವಾಕ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದು ಕೊನೆಗೆ ಚೆಕ್ ಔಟ್ ವೇಳೆ, ಹಣ ಕೊಡದೆ ಪರಾರಿಯಾಗಿದ್ದ. ಹೊಟೇಲ್ ರೂಮ್ ಬಾಡಿಗೆ ನಾಲ್ಕು ಸಾವಿರ ರೂಪಾಯಿ ಆಗಬೇಕಿತ್ತು. ಈ ಬಗ್ಗೆ ಹೊಟೇಲಿನ ಮಾಲಕರೂ, ಮಂಗಳೂರು ಹೊಟೇಲ್ ಅಸೋಸಿಯೇಶನಲ್ಲಿ ಖಜಾಂಚಿಯೂ ಆಗಿರುವ ಅಬ್ರಾರ್ ಬಂದರು ಪೊಲೀಸರಿಗೆ ದೂರು ನೀಡಿದ್ದರು. ಆನಂತರ ಆತ ನೀಡಿದ್ದ ಐಡಿ ಕಾರ್ಡನ್ನು ಹೊಟೇಲ್ ಅಸೋಸಿಯೇಶನ್ ಗ್ರೂಪಲ್ಲಿ ಷೇರ್ ಮಾಡಿದ್ದರು.


ಈ ವೇಳೆ, ಅದೇ ವ್ಯಕ್ತಿ ನವಭಾರತ ವೃತ್ತದಲ್ಲಿರುವ ಪ್ಯಾಪಿಲಾನ್ ಪ್ಯಾಲೇಸ್ ಎನ್ನುವ ಹೊಟೇಲಿನಲ್ಲಿಯೂ ಇದೇ ರೀತಿ ಮೋಸ ಮಾಡಿದ್ದು ತಿಳಿದುಬಂದಿದೆ. ಸಿಟಿ ವಾಕ್ ಹೊಟೇಲಿಗೆ ಬರುವುದಕ್ಕೂ ಮುನ್ನ ಪ್ಯಾಪಿಲಾನ್ ಹೊಟೇಲಿಗೆ ತೆರಳಿದ್ದ. ಅಲ್ಲಿ ಒಂದಷ್ಟು ದಿನ ಇದ್ದುಕೊಂಡು ಬಳಿಕ ಅಲ್ಲಿಂದ ಹಣ ಕೊಡದೆ ತೆರಳಿದ್ದ. ಈ ವಿಚಾರ ತಿಳಿಯುತ್ತಲೇ ಹೊಟೇಲ್ ಅಸೋಸಿಯೇಶನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮತ್ತು ಜನರಲ್ ಸೆಕ್ರೆಟರಿ ನಿಶಾಂಕ್ ಸುವರ್ಣ, ಪ್ಯಾಪಿಲಾನ್ ಹೊಟೇಲಿಗೆ ಭೇಟಿ ನೀಡಿದ್ದು, ಬಂದರು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಎಸಿಪಿ ಪಿಎ ಹೆಗಡೆ ಮತ್ತು ಬಂದರು ಇನ್ ಸ್ಪೆಕ್ಟರ್ ರಾಘವೇಂದ್ರ ನಕಲಿ ವ್ಯಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸಿದಾಗ ಆತನಲ್ಲಿರುವುದು ಫೇಕ್ ಐಡಿಯೆಂದು ಗೊತ್ತಾಗಿದೆ. ಅಲ್ಲದೆ, ಈ ಹಿಂದೆ ಇದೇ ವ್ಯಕ್ತಿ ತಮಿಳುನಾಡಿನ ಸೇಲಂನಲ್ಲಿ ನಲಂದಾ ಎನ್ನುವ ಹೊಟೇಲ್ ನಲ್ಲಿ ಉಳಿದುಕೊಂಡು 15 ಸಾವಿರ ರೂ. ಮೋಸ ಮಾಡಿದ್ದ ಎನ್ನುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
Fake Doctor with Fake AIMS Medical ID held in Mangalore. The incident came to light after he escaped from a lodge in the city without making payment. The Bunder police have arrested the accused and have stated that he has done the same pattern with many lodges in India showing fake medical ID.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 03:39 pm
HK News Staffer
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm