ಬ್ರೇಕಿಂಗ್ ನ್ಯೂಸ್
25-08-21 05:25 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 25: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು ಮೈಸೂರನ್ನ ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನ ಕುಡುಕರ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹರಿದು ಮುಕ್ಕಿದೆ.
ಸ್ನೇಹಿತನ ಜೊತೆಗೆ ಕುಳಿತಿದ್ದ ವೇಳೆ, ಎಣ್ಣೆ ಪಾರ್ಟಿ ಮಾಡ್ತಿದ್ದ ಕಾಮುಕರು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ. ನಿನ್ನೆ ಸಂಜೆ ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಲೇಔಟ್ ಗೆ ಬಂದಿದ್ದರು. ಅಲ್ಲಿನ ಮೂಲೆಯಲ್ಲಿ ಇಬ್ಬರೂ ಕುಳಿತಿದ್ದ ವೇಳೆ ಅಲ್ಲಿಯೇ ಕುಳಿತು ಎಣ್ಣೆ ಪಾರ್ಟಿ ಮಾಡುತ್ತಿದ್ದ ಐವರ ಗ್ಯಾಂಗ್ ವಿದ್ಯಾರ್ಥಿನಿಯ ಮೇಲೆರಗಿದ್ದಾರೆ.

ಈ ವೇಳೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿನಿಯ ಸ್ನೇಹಿತನಿಗೆ ಗ್ಯಾಂಗ್ ಹಲ್ಲೆ ಮಾಡಿದ್ದು ಕಲ್ಲಿನಿಂದ ಹೊಡೆದು ಅಟ್ಟಿದ್ದಾರೆ. ಕಲ್ಲಿನೇಟಿನಿಂದ ಸ್ನೇಹಿತ ಕುಸಿದು ಬಿದ್ದ ಬಳಿಕ ವಿದ್ಯಾರ್ಥಿನಿಯನ್ನ ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ನಾಲ್ಕರಿಂದ ಐದು ಮಂದಿಯಿದ್ದ ಗ್ಯಾಂಗ್ ಅತ್ಯಾಚಾರ ಮಾಡಿದ್ದಾರೆ. ಬಳಿಕ ಎಚ್ಚತ್ತುಕೊಂಡ ಹುಡುಗಿಯ ಸ್ನೇಹಿತ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಅಸ್ವಸ್ಥಳಾಗಿ ಬಿದ್ದಿದ್ದ ವಿದ್ಯಾರ್ಥಿನಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಾಯಗೊಂಡ ಸಂತ್ರಸ್ತೆಯ ಸ್ನೇಹಿತನ ಹೇಳಿಕೆಯನ್ನ ದಾಖಲು ಮಾಡಿದ್ದಾರೆ.
ಎಸಿಪಿ ಶಶಿಧರ್ ಹಾಗೂ ಆಲನಹಳ್ಳಿ ಠಾಣಾ ಇನ್ಸ್ಪೆಕ್ಟರ್ ರವಿಶಂಕರ್ ಸಿಬ್ಬಂದಿಯೊಂದಿಗೆ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಆಗಮಿಸಿದ್ದು ಘಟನೆಯನ್ನ ಖಂಡಿಸಿದ್ದಾರೆ.
A student of a private college in Mysore has been gang-raped by 6 boys at a deserted place. The girl had come with her friend to the spot. Six boys assaulted the girl and then raped her.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm