ಬ್ರೇಕಿಂಗ್ ನ್ಯೂಸ್
26-08-21 12:00 pm Headline Karnataka News Network ಕ್ರೈಂ
ಮಲಪ್ಪುರಂ, ಆಗಸ್ಟ್ 26: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕಾಮತೃಷೆಗೆ ಬಳಸಿಕೊಂಡ ಪಾಪಿ ತಂದೆಯೊಬ್ಬನ ಅಮಾನವೀಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಕೇರಳದ ಮಂಜೇರಿ ಪೊಕ್ಸೊ ವಿಶೇಷ ನ್ಯಾಯಾಲಯ ಡಬಲ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. ಜೊತೆಗೆ 3 ಲಕ್ಷ ದಂಡ ಕಟ್ಟುವಂತೆ ಸೂಚಿಸಿದೆ.
55 ವರ್ಷದ ವ್ಯಕ್ತಿಯ ವಿರುದ್ಧದ ಎರಡು ಪ್ರಕರಣಗಳಲ್ಲಿ ಮೊದಲನೆಯ ಪ್ರಕರಣದ ತೀರ್ಪನ್ನು ಮಂಜೇರಿಯ ತ್ವರಿತಗತಿ ವಿಶೇಷ ನ್ಯಾಯಾಲಯ ಪ್ರಕಟಿಸಿತು. ಭಾರತೀಯ ದಂಡ ಸಂಹಿತೆ 376, 511 (ಅತ್ಯಾಚಾರ ಯತ್ನ), 254 (ಮಹಿಳೆಯ ಮೇಲೆ ದೌರ್ಜನ್ಯ), 506 (2) (ಕ್ರಿಮಿನಲ್ ಬೆದರಿಕೆ) ಹಾಗೂ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಅಪರಾಧಿಗೆ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ.

2014-2016ರ ನಡುವೆ ಪತ್ನಿಯೊಂದಿಗೆ ಜಗಳವಾಡಿದ ನಂತರ ಅಪರಾಧಿ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾಗ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಮಕ್ಕಳು ತಮ್ಮ ತಾಯಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. 2016ರ ಮಾರ್ಚ್ನಲ್ಲಿ, 15 ಮತ್ತು 17 ವರ್ಷ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಷಯ ತಿಳಿದ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಸಿಆರ್ಪಿಸಿ ಸೆಕ್ಷನ್ 433-ಎ ಪ್ರಕಾರ, ಆರೋಪಿ ತಪ್ಪು ಮಾಡಿರುವುದು ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಸಾಬೀತಾದರೆ ಡಬಲ್ ಜೀವಾವಧಿ ಶಿಕ್ಷೆ ನೀಡಲಾಗುತ್ತದೆ. ಯಾವ ಪ್ರಕರಣದಲ್ಲಿ ಹೆಚ್ಚು ಅವಧಿಯ ಶಿಕ್ಷೆ ವಿಧಿಸಲಾಗುತ್ತದೆಯೋ ಆ ಶಿಕ್ಷೆಯನ್ನು ಆತ ಪೂರೈಸಬೇಕಾಗುತ್ತದೆ. ಕನಿಷ್ಠ 14 ವರ್ಷ ಜೀವಾವಧಿ ಶಿಕ್ಷೆ ಅನುಭವಿಸಬೇಕಾಗುತ್ತದೆ.
In an extremely aggravated sexual assault case involving the Protection of Children from Sexual Offences (POCSO) Act, a court at Manjeri sentenced a man for imprisonment until his death for repeatedly raping two of his minor daughters.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm